ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಲ್ಪಾನಾಗ್ ನನಗೆ ರಾಜೀನಾಮೆ ಸಲ್ಲಿಸಿಲ್ಲ: ಮುಖ್ಯ ಕಾರ್ಯದರ್ಶಿ ರವಿಕುಮಾರ್‌

Last Updated 4 ಜೂನ್ 2021, 10:34 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಅವರು ನನಗೆ ರಾಜೀನಾಮೆ ಪತ್ರ ಸಲ್ಲಿಸಿಲ್ಲ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಷ್ಟೇ ಮೈಸೂರಿಗೆ ಭೇಟಿ ನೀಡಿರುವೆ’ ಎಂದು ಹೇಳಿದರು.

ರವಿಕುಮಾರ್‌ ಭೇಟಿಯಾದ ರೋಹಿಣಿ ಸಿಂಧೂರಿ: ಆಡಳಿತ ತರಬೇತಿ‌ ಸಂಸ್ಥೆಗೆ ನಿಗದಿತ ಸಮಯಕ್ಕಿಂತ ಮುನ್ನ ಸಭೆಗೆ ಆಗಮಿಸಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರನ್ನು ಭೇಟಿಯಾದರು. ಸದ್ಯ ಮೈಸೂರಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ರೋಹಿಣಿ ವಿವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ಅಂಗೀಕರಿಸದಂತೆ ಒತ್ತಾಯ: ಶಿಲ್ಪಾನಾಗ್ ರವರ ರಾಜೀನಾಮೆ ಅಂಗೀಕಾರ ಮಾಡದಂತೆ ಪಾಲಿಕೆ ಸದಸ್ಯರು ಒತ್ತಾಯಿಸಿದ್ದಾರೆ. ಮುಖ್ಯ ಕಾರ್ಯದರ್ಶಿ ಭೇಟಿ ಸಾಧ್ಯವಾಗದ ಹಿನ್ನೆಲೆ ತಹಶೀಲ್ದಾರ್‌ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT