<p><strong>ಹುಣಸೂರು</strong>: ನಾಗರಹೊಳೆ ಅರಣ್ಯದ ವೀರನಹೊಸಹಳ್ಳಿ ವಲಯಕ್ಕೆ ಹೊಂದಿಕೊಂಡಿರುವ ಐಯ್ಯನಕೆರೆ ಹಾಡಿಯ ನಿವಾಸಿ ಗಣೇಶ್ (13) ಹುಲಿ ದಾಳಿಗೆ ಬುಧವಾರ ಮೃತಪಟ್ಟಿದ್ದಾನೆ.</p>.<p>ಲಕ್ಷ್ಮಿ ಮತ್ತು ಕರಿಯಯ್ಯ ಅವರ ಪುತ್ರ ಗಣೇಶ್ ಬಹಿರ್ದೆಸೆಗೆಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ 100 ಮೀಟರ್ ದೂರಕ್ಕೆ ತೆರಳಿದ್ದ. ಎಷ್ಟು ಹೊತ್ತಾದರೂ ಮನೆಗೆ ಬಂದಿರಲಿಲ್ಲ. ಕುಟುಂಬದ ಸದಸ್ಯರು ಹುಡುಕಾಟ ನಡೆಸಿದ್ದು, ಸಮೀಪದಲ್ಲೇ ಶವ ಪತ್ತೆಯಾಗಿದೆ.</p>.<p>ಹುಲಿ ಓಡಾಡಿರುವ ಹೆಜ್ಜೆ ಗುರುತುಗಳು ಇತ್ತೀಚೆಗೆ ಕಂಡುಬಂದಿದ್ದವು. ಇದೇ ಹುಲಿ ಬಾಲಕನ ಮೇಲೆ ದಾಳಿ ಮಾಡಿರಬಹುದು ಎಂದು ಹಾಡಿ ನಿವಾಸಿಗಳು ಶಂಕಿಸಿದ್ದಾರೆ.</p>.<p class="Subhead">ಎರಡನೇ ಘಟನೆ: ಹುಲಿ ದಾಳಿಗೆ ಇದು ಎರಡನೇ ಬಲಿಯಾಗಿದ್ದು, ಕಳೆದ 6 ತಿಂಗಳ ಹಿಂದೆ ನೇರಳಕುಪ್ಪೆ ಹಾಡಿ ವ್ಯಾಪ್ತಿಯಲ್ಲಿ ಹುಲಿ ದಾಳಿಗೆ ವ್ಯಕ್ತಿ ಮೃತಪಟ್ಟಿದ್ದರು.</p>.<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್, ‘ಇಲಾಖೆ ನಿಯಮಾನುಸಾರ ಪರಿಹಾರ ನೀಡಲಾಗುವುದು’ ಎಂದು ತಿಳಿಸಿದರು.</p>.<p>ವಲಯ ಅರಣ್ಯಾಧಿಕಾರಿ ಹನುಮಂತು, ಸಹಾಯಕ ವಲಯ ಅರಣ್ಯಾಧಿಕಾರಿ ಸಿದ್ದರಾಜು, ವೀರಭದ್ರಯ್ಯ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ನಾಗರಹೊಳೆ ಅರಣ್ಯದ ವೀರನಹೊಸಹಳ್ಳಿ ವಲಯಕ್ಕೆ ಹೊಂದಿಕೊಂಡಿರುವ ಐಯ್ಯನಕೆರೆ ಹಾಡಿಯ ನಿವಾಸಿ ಗಣೇಶ್ (13) ಹುಲಿ ದಾಳಿಗೆ ಬುಧವಾರ ಮೃತಪಟ್ಟಿದ್ದಾನೆ.</p>.<p>ಲಕ್ಷ್ಮಿ ಮತ್ತು ಕರಿಯಯ್ಯ ಅವರ ಪುತ್ರ ಗಣೇಶ್ ಬಹಿರ್ದೆಸೆಗೆಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ 100 ಮೀಟರ್ ದೂರಕ್ಕೆ ತೆರಳಿದ್ದ. ಎಷ್ಟು ಹೊತ್ತಾದರೂ ಮನೆಗೆ ಬಂದಿರಲಿಲ್ಲ. ಕುಟುಂಬದ ಸದಸ್ಯರು ಹುಡುಕಾಟ ನಡೆಸಿದ್ದು, ಸಮೀಪದಲ್ಲೇ ಶವ ಪತ್ತೆಯಾಗಿದೆ.</p>.<p>ಹುಲಿ ಓಡಾಡಿರುವ ಹೆಜ್ಜೆ ಗುರುತುಗಳು ಇತ್ತೀಚೆಗೆ ಕಂಡುಬಂದಿದ್ದವು. ಇದೇ ಹುಲಿ ಬಾಲಕನ ಮೇಲೆ ದಾಳಿ ಮಾಡಿರಬಹುದು ಎಂದು ಹಾಡಿ ನಿವಾಸಿಗಳು ಶಂಕಿಸಿದ್ದಾರೆ.</p>.<p class="Subhead">ಎರಡನೇ ಘಟನೆ: ಹುಲಿ ದಾಳಿಗೆ ಇದು ಎರಡನೇ ಬಲಿಯಾಗಿದ್ದು, ಕಳೆದ 6 ತಿಂಗಳ ಹಿಂದೆ ನೇರಳಕುಪ್ಪೆ ಹಾಡಿ ವ್ಯಾಪ್ತಿಯಲ್ಲಿ ಹುಲಿ ದಾಳಿಗೆ ವ್ಯಕ್ತಿ ಮೃತಪಟ್ಟಿದ್ದರು.</p>.<p>ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್, ‘ಇಲಾಖೆ ನಿಯಮಾನುಸಾರ ಪರಿಹಾರ ನೀಡಲಾಗುವುದು’ ಎಂದು ತಿಳಿಸಿದರು.</p>.<p>ವಲಯ ಅರಣ್ಯಾಧಿಕಾರಿ ಹನುಮಂತು, ಸಹಾಯಕ ವಲಯ ಅರಣ್ಯಾಧಿಕಾರಿ ಸಿದ್ದರಾಜು, ವೀರಭದ್ರಯ್ಯ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>