<p><strong>ಬೆಂಗಳೂರು: </strong>ಚಿಟ್ ಫಂಡ್ ಹೆಸರಿನಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ್ದ ಆರೋಪದಡಿ 'ವಾರಿಧಿ ಚಿಟ್ ಫಂಡ್' ಕಂಪನಿ ಸಂಸ್ಥಾಪಕಿ ಲಕ್ಷ್ಮಿ ಅಲಿಯಾಸ್ ವಾಣಿ (36) ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜಾಜಿನಗರ ನಿವಾಸಿ ಲಕ್ಷ್ಮಿ 2018ರಲ್ಲಿ ವಾರಿಧಿ ಚಿಟ್ ಫಂಡ್ ಕಂಪನಿ ಸ್ಥಾಪಿಸಿದ್ದರು. ನೂರಾರು ಜನರಿಂದ ಹಣ ಕಟ್ಟಿಸಿಕೊಂಡು ವಂಚಿಸಿ ತಲೆಮರೆಸಿಕೊಂಡಿದ್ದರು. ಅವರ ವಿರುದ್ಧ ಗ್ರಾಹಕರೊಬ್ಬರು ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿ ಲಕ್ಷ್ಮಿ ಎರಡು ಮದುವೆಯಾಗಿದ್ದರು. ಇಬ್ಬರಿಂದಲೂ ದೂರವಾಗಿ ಪ್ರತ್ಯೇಕವಾಗಿ ವಾಸವಿದ್ದರೆಂದು ಗೊತ್ತಾಗಿದೆ. ಕಂಪನಿ ಸ್ಥಾಪನೆಗೂ ಮುನ್ನ ಖಾಸಗಿ ಕಂಪನಿಯೊಂದರಲ್ಲಿ ಆರೋಪಿ ಲಾಭದ ಆಮಿಷವೊಡ್ಡಿ ಜನರಿಂದ ಕಂಪನಿಗೆ ಹಣ ಕಟ್ಟಿಸುತ್ತಿದ್ದರು. ಕೆಲಸದ ಸ್ಥಳದಲ್ಲೇ ಅವರಿಗೆ ಸುದರ್ಶನ್ ಎಂಬುವರ ಪರಿಚಯವಾಗಿ, ಸಲುಗೆ ಬೆಳೆದಿತ್ತು.’</p>.<p>‘ಸುದರ್ಶನ್ ಅವರನ್ನು ಮೂರನೇ ಮದುವೆಯಾಗಿದ್ದ ಆರೋಪಿ, ಅವರ ಜೊತೆ ಸೇರಿ ರಾಜಾಜಿನಗರದಲ್ಲಿ ವಾರಿಧಿ ಚಿಟ್ ಫಂಡ್ ಕಂಪನಿ ತೆರೆದಿದ್ದರು. ಉದ್ಯೋಗಿಗಳನ್ನೇ ನಿರ್ದೇಶಕರನ್ನಾಗಿ ಮಾಡಿಕೊಂಡು ಕಂಪನಿ ನೋಂದಣಿ ಮಾಡಿಸಿದ್ದರು. ಹೆಚ್ಚಿನ ಲಾಭ ನೀಡುವುದಾಗಿ ಜಾಹೀರಾತು ನೀಡಿ ಜನರಿಂದ ಹಣ ಕಟ್ಟಿಸಿಕೊಂಡಿದ್ದರು’ ಎಂದೂ ತಿಳಿಸಿವೆ.</p>.<p class="Subhead"><strong>ಕೋವಿಡ್ನಿಂದ ನಷ್ಟ:</strong> ‘ಆರಂಭದಲ್ಲಿ ಉತ್ತಮ ವಹಿವಾಟು ನಡೆಸುತ್ತಿದ್ದ ಕಂಪನಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಚಿಟ್ ಫಂಡ್ ಹಣ ಪಡೆದಿದ್ದವರು, ವಾಪಸು ನೀಡಿರಲಿಲ್ಲ. ಇದೇ ಕಾರಣಕ್ಕೆ ಆರೋಪಿಗಳು, ಕಂಪನಿ ಕಚೇರಿ ಬಂದ್ ಮಾಡಿ ತಲೆಮರೆಸಿಕೊಂಡಿದ್ದರು’ ಎಂದೂ ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮನೆ ಬಾಡಿಗೆ ಪಾವತಿ ಹಾಗೂ ಜೀವನ ನಿರ್ವಹಣೆಗೂ ಹಣವಿಲ್ಲದೆ ಪರದಾಡುತ್ತಿದ್ದ ಲಕ್ಷ್ಮಿ, ಕೆಂಗೇರಿಯ ಕಲ್ಯಾಣ ಮಂಟಪವೊಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿದ್ದರು. ಅದರಿಂದ ದಿನಕ್ಕೆ ₹ 800 ಸಿಗುತ್ತಿತ್ತು. ಅದೇ ಹಣದಲ್ಲೇ ಜೀವನ ಸಾಗಿಸುತ್ತಿದ್ದರು. ಕಲ್ಯಾಣ ಮಂಟಪದಲ್ಲಿರುವಾಗಲೇ ಅವರನ್ನು ಬಂಧಿಸಲಾಗಿದೆ. ಸುದರ್ಶನ್ ತಲೆಮರೆಸಿಕೊಂಡಿದ್ದಾರೆ’ ಎಂದೂ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಿಟ್ ಫಂಡ್ ಹೆಸರಿನಲ್ಲಿ ಜನರಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ವಂಚಿಸಿದ್ದ ಆರೋಪದಡಿ 'ವಾರಿಧಿ ಚಿಟ್ ಫಂಡ್' ಕಂಪನಿ ಸಂಸ್ಥಾಪಕಿ ಲಕ್ಷ್ಮಿ ಅಲಿಯಾಸ್ ವಾಣಿ (36) ಅವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.</p>.<p>‘ರಾಜಾಜಿನಗರ ನಿವಾಸಿ ಲಕ್ಷ್ಮಿ 2018ರಲ್ಲಿ ವಾರಿಧಿ ಚಿಟ್ ಫಂಡ್ ಕಂಪನಿ ಸ್ಥಾಪಿಸಿದ್ದರು. ನೂರಾರು ಜನರಿಂದ ಹಣ ಕಟ್ಟಿಸಿಕೊಂಡು ವಂಚಿಸಿ ತಲೆಮರೆಸಿಕೊಂಡಿದ್ದರು. ಅವರ ವಿರುದ್ಧ ಗ್ರಾಹಕರೊಬ್ಬರು ದೂರು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿ ಲಕ್ಷ್ಮಿ ಎರಡು ಮದುವೆಯಾಗಿದ್ದರು. ಇಬ್ಬರಿಂದಲೂ ದೂರವಾಗಿ ಪ್ರತ್ಯೇಕವಾಗಿ ವಾಸವಿದ್ದರೆಂದು ಗೊತ್ತಾಗಿದೆ. ಕಂಪನಿ ಸ್ಥಾಪನೆಗೂ ಮುನ್ನ ಖಾಸಗಿ ಕಂಪನಿಯೊಂದರಲ್ಲಿ ಆರೋಪಿ ಲಾಭದ ಆಮಿಷವೊಡ್ಡಿ ಜನರಿಂದ ಕಂಪನಿಗೆ ಹಣ ಕಟ್ಟಿಸುತ್ತಿದ್ದರು. ಕೆಲಸದ ಸ್ಥಳದಲ್ಲೇ ಅವರಿಗೆ ಸುದರ್ಶನ್ ಎಂಬುವರ ಪರಿಚಯವಾಗಿ, ಸಲುಗೆ ಬೆಳೆದಿತ್ತು.’</p>.<p>‘ಸುದರ್ಶನ್ ಅವರನ್ನು ಮೂರನೇ ಮದುವೆಯಾಗಿದ್ದ ಆರೋಪಿ, ಅವರ ಜೊತೆ ಸೇರಿ ರಾಜಾಜಿನಗರದಲ್ಲಿ ವಾರಿಧಿ ಚಿಟ್ ಫಂಡ್ ಕಂಪನಿ ತೆರೆದಿದ್ದರು. ಉದ್ಯೋಗಿಗಳನ್ನೇ ನಿರ್ದೇಶಕರನ್ನಾಗಿ ಮಾಡಿಕೊಂಡು ಕಂಪನಿ ನೋಂದಣಿ ಮಾಡಿಸಿದ್ದರು. ಹೆಚ್ಚಿನ ಲಾಭ ನೀಡುವುದಾಗಿ ಜಾಹೀರಾತು ನೀಡಿ ಜನರಿಂದ ಹಣ ಕಟ್ಟಿಸಿಕೊಂಡಿದ್ದರು’ ಎಂದೂ ತಿಳಿಸಿವೆ.</p>.<p class="Subhead"><strong>ಕೋವಿಡ್ನಿಂದ ನಷ್ಟ:</strong> ‘ಆರಂಭದಲ್ಲಿ ಉತ್ತಮ ವಹಿವಾಟು ನಡೆಸುತ್ತಿದ್ದ ಕಂಪನಿ, ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಚಿಟ್ ಫಂಡ್ ಹಣ ಪಡೆದಿದ್ದವರು, ವಾಪಸು ನೀಡಿರಲಿಲ್ಲ. ಇದೇ ಕಾರಣಕ್ಕೆ ಆರೋಪಿಗಳು, ಕಂಪನಿ ಕಚೇರಿ ಬಂದ್ ಮಾಡಿ ತಲೆಮರೆಸಿಕೊಂಡಿದ್ದರು’ ಎಂದೂ ಪೊಲೀಸ್ ಮೂಲಗಳು ಹೇಳಿವೆ.</p>.<p>‘ಮನೆ ಬಾಡಿಗೆ ಪಾವತಿ ಹಾಗೂ ಜೀವನ ನಿರ್ವಹಣೆಗೂ ಹಣವಿಲ್ಲದೆ ಪರದಾಡುತ್ತಿದ್ದ ಲಕ್ಷ್ಮಿ, ಕೆಂಗೇರಿಯ ಕಲ್ಯಾಣ ಮಂಟಪವೊಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿದ್ದರು. ಅದರಿಂದ ದಿನಕ್ಕೆ ₹ 800 ಸಿಗುತ್ತಿತ್ತು. ಅದೇ ಹಣದಲ್ಲೇ ಜೀವನ ಸಾಗಿಸುತ್ತಿದ್ದರು. ಕಲ್ಯಾಣ ಮಂಟಪದಲ್ಲಿರುವಾಗಲೇ ಅವರನ್ನು ಬಂಧಿಸಲಾಗಿದೆ. ಸುದರ್ಶನ್ ತಲೆಮರೆಸಿಕೊಂಡಿದ್ದಾರೆ’ ಎಂದೂ ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>