ಇತ್ತ ನಗರದ ಓವಲ್ ಮೈದಾನದಲ್ಲಿ ಕಾಯ್ದೆಯ ಪರವಾಗಿ ಬಿಜೆಪಿ ಹಾಗೂ ಮತ್ತಿತರಸಂಘಟನೆಗಳು ಶಕ್ತಿ ಪ್ರದರ್ಶನ ನಡೆಸಿದವು. ಶಾಸಕ ರಾಮದಾಸ್, ಬಿಜೆಪಿ ಮುಖಂಡ ಬಿ.ಪಿ.ಮಂಜುನಾಥ್ ಸೇರಿದಂತೆ ಹಲವು ಪ್ರಮುಖರು ಇದರಲ್ಲಿ ಭಾಗಿಯಾದರು. ಸುಮಾರು ಒಂದು ಗಂಟೆಗಳ ಕಾಲ ಕೇಂದ್ರ ಸರ್ಕಾರ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆಯ ಪರವಾಗಿ ಘೋಷಣೆಗಳನ್ನು ಕಾರ್ಯಕರ್ತರು ಕೂಗಿದರು. ನಂತರ, ಸ್ಥಳಕ್ಕೆ ಬಂದ ಪೊಲೀಸರು ಇವರನ್ನು ತೆರವುಗೊಳಿಸಿದರು.