‘ಹರಿಯಾಣ ಸರ್ಕಾರ ಕ್ರೀಡಾಪಟುಗಳಿಗೆ ಗರಿಷ್ಠ ಬಹುಮಾನ ಮೊತ್ತ ನೀಡುತ್ತಿರುವುದು ಎಲ್ಲರಿಗೂ ಗೊತ್ತಿದೆ. ರೈಲ್ವೆ, ಸರ್ವಿಸಸ್ ಮುಂತಾದ ಸಂಸ್ಥೆಗಳನ್ನು ಪ್ರತಿನಿಧಿಸುವ ರಾಜ್ಯದ ಕ್ರೀಡಾಪಟುಗಳಿಗೂ ಬಹುಮಾನ ನೀಡಲಾಗುತ್ತಿದೆ. ಅವರಿಗೆ ಸಂಬಂಧಪಟ್ಟ ಸಂಸ್ಥೆಗಳಿಂದಲೂ ಬಹುಮಾನ ಮೊತ್ತ ಲಭಿಸುತ್ತದೆ. ಅವರಿಗೆ ಕಡಿಮೆ ಮೊತ್ತ ನೀಡದಿದ್ದರೆ ರಾಜ್ಯವನ್ನು ಪ್ರತಿನಿಧಿಸಿದವರಿಗೆ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ವಿಜ್ ಹೇಳಿದರು.