‘ಈ ಜಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂಸದ ಪ್ರತಾಪ ಸಿಂಹ, ಪದಾಧಿಕಾರಿಗಳು ಹಾಗೂ ಪಾಲಿಕೆ ಸದಸ್ಯರೆಲ್ಲರೂ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇಲ್ಲಿ ಜೆಡಿಎಸ್–ಬಿಜೆಪಿಯ ಹೊಂದಾಣಿಕೆ ಪ್ರಶ್ನೆ ಇಲ್ಲ. ಸ್ಥಳೀಯವಾಗಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಗರದ ಅಭಿವೃದ್ಧಿಗೆ ಆಗಿರುವ ಹಿನ್ನಡೆ ಅವರಿಗೆ ನಮಗಿಂತ ಹೆಚ್ಚು ತಿಳಿದುಕೊಂಡಿದ್ದರಿಂದ ಈ ನಿರ್ಣಯ ಬಂದಿದೆ’ ಎಂದರು.