ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಸಿಎಂ ಬೊಮ್ಮಾಯಿ

Last Updated 16 ಅಕ್ಟೋಬರ್ 2021, 6:47 IST
ಅಕ್ಷರ ಗಾತ್ರ

ಮೈಸೂರು: ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂದ ನಾಲ್ಕು ದಿನಗಳ ಪ್ರಾಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT