ಸೆ.25ರಂದು ಮಧ್ಯಾಹ್ನ 3.05ಕ್ಕೆ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದಿಳಿಯುವರು. ಮಧ್ಯಾಹ್ನ 3.30ಕ್ಕೆ ಕೆಎಸ್ಒಯು ಶತಮಾನೋತ್ಸವ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಆಯೋಜಿಸಿರುವ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4.30ಕ್ಕೆ ವಿದ್ಯಾರಣ್ಯಪುರಂನ ರಾಮಲಿಂಗೇಶ್ವರ ಉದ್ಯಾನದಲ್ಲಿ ಆಯೋಜಿಸಿರುವ ‘ಮೋದಿ ಯುಗ ಉತ್ಸವ’ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ ವಾಸ್ತವ್ಯ ಹೂಡುವರು.