<p><strong>ಎಚ್.ಡಿ.ಕೋಟೆ: </strong>ಮುಖ್ಯಮಂತ್ರಿ ಯಡಿಯೂರಪ್ಪ ಆ. 21ರಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ಶಾಸಕ ಸಿ.ಅನಿಲ್ಕುಮಾರ್ ತಿಳಿಸಿದರು.</p>.<p>ಮುಖ್ಯಮಂತ್ರಿ ಬರುವ ಹಿನ್ನೆಲೆಯಲ್ಲಿ ಜಲಾಶಯದ ಪ್ರವಾಸಿ ಮಂದಿರದಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.</p>.<p>‘ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಮುಂದಿನ ಜಾಗದಲ್ಲಿ ಸುಮಾರು ₹50.30 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ಮತ್ತು ಬಿದರಹಳ್ಳಿ ವೃತ್ತದವರೆಗೆ ರಸ್ತೆ ನಿರ್ಮಾಣಕ್ಕೆ ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಲಿದ್ದಾರೆ’ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಯಡಿಯೂರಪ್ಪ ನವರು ಜಲಾಶಯದ ಮುಂದೆ ಸೇತುವೆ ನಿರ್ಮಾಣ ಮತ್ತು ಕೊಲ್ಲೇಗೌಡನಹಳ್ಳಿ ವೃತ್ತದಿಂದ ಬೀಚನಹಳ್ಳಿ ಗ್ರಾಮದ ಮೂಲಕ ಬಿದರಹಳ್ಳಿ ವೃತ್ತದವರೆಗಿನ ಸುಮಾರು 10 ಕಿ.ಮೀ ರಸ್ತೆ ಕಾಮ ಗಾರಿಗೂ ಆಡಳಿತಾತ್ಮಕ ಮಂಜೂರಾತಿ ನೀಡಿದ್ದಾರೆ. ಸೇತುವೆ ಕಾಮಗಾರಿಗೆ ₹ 25.30 ಕೋಟಿ ಮತ್ತು ಕಾಂಕ್ರೀಟ್ ರಸ್ತೆಗೆ ₹ 25 ಕೋಟಿ ಮಂಜೂರಾಗಿದ್ದು, ಟಿಎಸ್ಪಿ ಯೋಜನೆಯಡಿ ಕಾಮಗಾರಿ ನಡೆಯಲಿದೆ, ಈ ಭಾಗದ ಜನರ ಜಲಾಶಯ ನಿರ್ಮಾಣವಾದಾಗಿನಿಂದ ಇದ್ದಂತಹ ಬೇಡಿಕೆಗೆ ಫಲ ದೊರೆತಂತಾಗಿದೆ’ ಎಂದರು.</p>.<p>‘ಈ ಸೇತುವೆ ನಿರ್ಮಾಣ ಮಾಡಬೇಕೆನ್ನುವುದು ತಮ್ಮ ತಂದೆ ದಿವಂಗತ ಚಿಕ್ಕಮಾದು ಅವರ ಕನಸಾಗಿತ್ತು. ಅದನ್ನು ಈಡೇರುತ್ತಿರು ವುದಕ್ಕೆ ನನಗೆ ಸಂತಸವಾಗಿದೆ. ವೈಯಕ್ತಿಕವಾಗಿ ಮುಖ್ಯಮಂತ್ರಿ ಯಡಿಯೂರಪ್ಪ, ಉಸ್ತುವಾರಿ ಸಚಿವ ಸೋಮಶೇಖರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದರು.</p>.<p>‘ಬಾಗಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪತ್ರಕರ್ತರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರೆ ಮಾತ್ರ ಒಳಗೆ ಪ್ರವೇಶ’ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್. ಶಿವಕುಮಾರ್ ತಿಳಿಸಿದರು.</p>.<p><strong>ಜಾಗ್ರತೆ ವಹಿಸಿ:</strong> ‘ಕೋವಿಡ್ ನಡುವೆಯೂ ಯಡಿಯೂರಪ್ಪ ಕಬಿನಿಗೆ ಬರುತ್ತಿದ್ದು, ಎಲ್ಲರೂ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಇಲ್ಲಿ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳ ಸಹಕಾರ ಮುಖ್ಯ. ಮುಖ್ಯಮಂತ್ರಿಯೊಂದಿಗೆ ಬರುವ ಸಚಿವರು, ಜನಪ್ರತಿನಿಧಿಗಳಿಗೆ ಆಹ್ವಾನ ನೀಡಬೇಕು’ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ: </strong>ಮುಖ್ಯಮಂತ್ರಿ ಯಡಿಯೂರಪ್ಪ ಆ. 21ರಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ ಎಂದು ಶಾಸಕ ಸಿ.ಅನಿಲ್ಕುಮಾರ್ ತಿಳಿಸಿದರು.</p>.<p>ಮುಖ್ಯಮಂತ್ರಿ ಬರುವ ಹಿನ್ನೆಲೆಯಲ್ಲಿ ಜಲಾಶಯದ ಪ್ರವಾಸಿ ಮಂದಿರದಲ್ಲಿ ಬುಧವಾರ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.</p>.<p>‘ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಮುಂದಿನ ಜಾಗದಲ್ಲಿ ಸುಮಾರು ₹50.30 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ಮತ್ತು ಬಿದರಹಳ್ಳಿ ವೃತ್ತದವರೆಗೆ ರಸ್ತೆ ನಿರ್ಮಾಣಕ್ಕೆ ಯಡಿಯೂರಪ್ಪ ಭೂಮಿಪೂಜೆ ನೆರವೇರಿಸಲಿದ್ದಾರೆ’ ಎಂದು ತಿಳಿಸಿದರು.</p>.<p>‘ಮುಖ್ಯಮಂತ್ರಿ ಯಡಿಯೂರಪ್ಪ ನವರು ಜಲಾಶಯದ ಮುಂದೆ ಸೇತುವೆ ನಿರ್ಮಾಣ ಮತ್ತು ಕೊಲ್ಲೇಗೌಡನಹಳ್ಳಿ ವೃತ್ತದಿಂದ ಬೀಚನಹಳ್ಳಿ ಗ್ರಾಮದ ಮೂಲಕ ಬಿದರಹಳ್ಳಿ ವೃತ್ತದವರೆಗಿನ ಸುಮಾರು 10 ಕಿ.ಮೀ ರಸ್ತೆ ಕಾಮ ಗಾರಿಗೂ ಆಡಳಿತಾತ್ಮಕ ಮಂಜೂರಾತಿ ನೀಡಿದ್ದಾರೆ. ಸೇತುವೆ ಕಾಮಗಾರಿಗೆ ₹ 25.30 ಕೋಟಿ ಮತ್ತು ಕಾಂಕ್ರೀಟ್ ರಸ್ತೆಗೆ ₹ 25 ಕೋಟಿ ಮಂಜೂರಾಗಿದ್ದು, ಟಿಎಸ್ಪಿ ಯೋಜನೆಯಡಿ ಕಾಮಗಾರಿ ನಡೆಯಲಿದೆ, ಈ ಭಾಗದ ಜನರ ಜಲಾಶಯ ನಿರ್ಮಾಣವಾದಾಗಿನಿಂದ ಇದ್ದಂತಹ ಬೇಡಿಕೆಗೆ ಫಲ ದೊರೆತಂತಾಗಿದೆ’ ಎಂದರು.</p>.<p>‘ಈ ಸೇತುವೆ ನಿರ್ಮಾಣ ಮಾಡಬೇಕೆನ್ನುವುದು ತಮ್ಮ ತಂದೆ ದಿವಂಗತ ಚಿಕ್ಕಮಾದು ಅವರ ಕನಸಾಗಿತ್ತು. ಅದನ್ನು ಈಡೇರುತ್ತಿರು ವುದಕ್ಕೆ ನನಗೆ ಸಂತಸವಾಗಿದೆ. ವೈಯಕ್ತಿಕವಾಗಿ ಮುಖ್ಯಮಂತ್ರಿ ಯಡಿಯೂರಪ್ಪ, ಉಸ್ತುವಾರಿ ಸಚಿವ ಸೋಮಶೇಖರ್ ಅವರಿಗೆ ಧನ್ಯವಾದ ತಿಳಿಸುತ್ತೇನೆ’ ಎಂದರು.</p>.<p>‘ಬಾಗಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ಪತ್ರಕರ್ತರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರೆ ಮಾತ್ರ ಒಳಗೆ ಪ್ರವೇಶ’ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್. ಶಿವಕುಮಾರ್ ತಿಳಿಸಿದರು.</p>.<p><strong>ಜಾಗ್ರತೆ ವಹಿಸಿ:</strong> ‘ಕೋವಿಡ್ ನಡುವೆಯೂ ಯಡಿಯೂರಪ್ಪ ಕಬಿನಿಗೆ ಬರುತ್ತಿದ್ದು, ಎಲ್ಲರೂ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು. ಇಲ್ಲಿ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳ ಸಹಕಾರ ಮುಖ್ಯ. ಮುಖ್ಯಮಂತ್ರಿಯೊಂದಿಗೆ ಬರುವ ಸಚಿವರು, ಜನಪ್ರತಿನಿಧಿಗಳಿಗೆ ಆಹ್ವಾನ ನೀಡಬೇಕು’ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>