<p><strong>ಮೈಸೂರು: </strong>‘ಡಿ.ಕೆ.ಶಿವಕುಮಾರ್ ಸುಮ್ಮನಿದ್ದರೆ ಒಳ್ಳೆಯದು. ಇಲ್ಲದಿದ್ದರೆ ಅವರೆಷ್ಟು ಕಮಿಷನ್ ಪಡೆದಿದ್ದರು ಎಂಬುದನ್ನು ಬಹಿರಂಗಪಡಿಸಬೇಕಾಗುತ್ತದೆ’ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಇಲ್ಲಿ ಎಚ್ಚರಿಕೆ ನೀಡಿದರು.</p>.<p>‘ಇದು ಕಮಿಷನ್ ಸರ್ಕಾರ’ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿ, ‘ನಾನು ಕೂಡ ಐದು ವರ್ಷ ಕಾಂಗ್ರೆಸ್ ಸರ್ಕಾರಲ್ಲಿ ಇದ್ದವನು. ಎಲ್ಲಾ ವಿಚಾರ ಗೊತ್ತು. ಹೀಗಾಗಿ, ಕಮಿಷನ್ ಆರೋಪ ಶೋಭೆ ತರುವಂಥದಲ್’ ಎಂದರು.</p>.<p>‘ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಕೋವಿಡ್ ಲಾಕ್ಡೌನ್ ಕಾರಣ ಏಳೆಂಟು ತಿಂಗಳು ಅಭಿವೃದ್ಧಿ ಕಾರ್ಯ ನಡೆದಿರಲಿಲ್ಲ. ಈಗ ಮತ್ತೆ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡಿವೆ. ಇಷ್ಟು ದಿನ ಮಲಗಿದ್ದ ಕಾಂಗ್ರೆಸ್ ನವರು ಈಗ ಎದ್ದಿದ್ದಾರೆ’ ಎಂದರು.</p>.<p>ಖರೀದಿಯಾದವರು ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿ, ‘ನಮ್ಮನ್ನು ಖರೀದಿಸಲು ಯಾರಿಗೂ ಸಾಧ್ಯವಿಲ್ಲ. ಚೆಲುವರಾಯಸ್ವಾಮಿ ಹಾಗೂ ಇತರರು ಕಾಂಗ್ರೆಸ್ ಸೇರಿದಾಗ ಅವರನ್ನು ಮುಂಬೈನಲ್ಲಿ ಇರಿಸುವ ಜವಾಬ್ದಾರಿ ಹೊತ್ತಿದ್ದೇ ನಾನು. ಆಗ ಏನೆಲ್ಲ ನಡೆಯಿತು ಎಂದು ಹೇಳಲೇ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಡಿ.ಕೆ.ಶಿವಕುಮಾರ್ ಸುಮ್ಮನಿದ್ದರೆ ಒಳ್ಳೆಯದು. ಇಲ್ಲದಿದ್ದರೆ ಅವರೆಷ್ಟು ಕಮಿಷನ್ ಪಡೆದಿದ್ದರು ಎಂಬುದನ್ನು ಬಹಿರಂಗಪಡಿಸಬೇಕಾಗುತ್ತದೆ’ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಇಲ್ಲಿ ಎಚ್ಚರಿಕೆ ನೀಡಿದರು.</p>.<p>‘ಇದು ಕಮಿಷನ್ ಸರ್ಕಾರ’ ಎಂಬ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿ, ‘ನಾನು ಕೂಡ ಐದು ವರ್ಷ ಕಾಂಗ್ರೆಸ್ ಸರ್ಕಾರಲ್ಲಿ ಇದ್ದವನು. ಎಲ್ಲಾ ವಿಚಾರ ಗೊತ್ತು. ಹೀಗಾಗಿ, ಕಮಿಷನ್ ಆರೋಪ ಶೋಭೆ ತರುವಂಥದಲ್’ ಎಂದರು.</p>.<p>‘ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಕೋವಿಡ್ ಲಾಕ್ಡೌನ್ ಕಾರಣ ಏಳೆಂಟು ತಿಂಗಳು ಅಭಿವೃದ್ಧಿ ಕಾರ್ಯ ನಡೆದಿರಲಿಲ್ಲ. ಈಗ ಮತ್ತೆ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡಿವೆ. ಇಷ್ಟು ದಿನ ಮಲಗಿದ್ದ ಕಾಂಗ್ರೆಸ್ ನವರು ಈಗ ಎದ್ದಿದ್ದಾರೆ’ ಎಂದರು.</p>.<p>ಖರೀದಿಯಾದವರು ಎಂಬ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿ, ‘ನಮ್ಮನ್ನು ಖರೀದಿಸಲು ಯಾರಿಗೂ ಸಾಧ್ಯವಿಲ್ಲ. ಚೆಲುವರಾಯಸ್ವಾಮಿ ಹಾಗೂ ಇತರರು ಕಾಂಗ್ರೆಸ್ ಸೇರಿದಾಗ ಅವರನ್ನು ಮುಂಬೈನಲ್ಲಿ ಇರಿಸುವ ಜವಾಬ್ದಾರಿ ಹೊತ್ತಿದ್ದೇ ನಾನು. ಆಗ ಏನೆಲ್ಲ ನಡೆಯಿತು ಎಂದು ಹೇಳಲೇ’ ಎಂದು ತಿರುಗೇಟು ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>