ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಗುಂಡ್ರೆ ವನ್ಯಜೀವಿ ವಲಯದಲ್ಲಿ ನಕ್ಸಲ್ ನಿಗ್ರಹ ಪಡೆಯ ಸಿಬ್ಬಂದಿ ಭಾನುವಾರ ಶೋಧ ಕಾರ್ಯ ನಡೆಸಿದರು.
ಅರಣ್ಯಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಅವರು ಮಾಹಿತಿ ವಿನಿಮಯ ಮಾಡಿಕೊಂಡರು. ಈ ಕುರಿತು ‘ಪ್ರಜಾವಾಣಿ’ ಹೆಚ್ಚುವರಿ ಜಿಲ್ಲಾ ಎಸ್ಪಿ ಶಿವಕುಮಾರ್ ಅವರನ್ನು ಸಂಪರ್ಕಿಸಿದಾಗ, ಶೋಧ ಕಾರ್ಯಾಚರಣೆ ನಡೆದಿರುವುದನ್ನು ಖಚಿತಪಡಿಸಿದರು.
‘ಇದೊಂದು ಸಹಜ ಕಾರ್ಯಾಚರಣೆಯಾಗಿದೆ. ನಕ್ಸಲರ ಚಲನವಲನಗಳು ಕೇರಳ ಭಾಗಕ್ಕೆ ಹೊಂದಿಕೊಂಡಿರುವ ರಾಜ್ಯದ ಅರಣ್ಯ ಪ್ರದೇಶದಲ್ಲಿ ಇದುವರೆಗೂ ಕಂಡು ಬಂದಿಲ್ಲ’ ಎಂದರು.