<p><strong>ಮೈಸೂರು:</strong> ‘ಒಕ್ಕಲಿಗರಿಗೆ ಪ್ರಸ್ತುತ ಮೀಸಲಾತಿಯಲ್ಲಿ ಶೇ 4ರಷ್ಟು ಮಾತ್ರ ಸಿಗುತ್ತಿದೆ. ಇದನ್ನು ಶೇ 15ಕ್ಕೆ ಹೆಚ್ಚಿಸಬೇಕು ಎಂಬುದು ಸಮುದಾಯದ ಬೇಡಿಕೆಯಾಗಿದೆ’ ಎಂದು ಮೈಸೂರು–ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಮಂಜು ಸೋಮವಾರ ಇಲ್ಲಿ ತಿಳಿಸಿದರು.</p>.<p>‘ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಒಕ್ಕಲಿಗರು ಬಲಾಢ್ಯರಾಗಿದ್ದೇವೆ. ಜನಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯ ಕೇಳುತ್ತಿದ್ದೇವೆ. ಸರ್ಕಾರ ಸ್ಪಂದಿಸದಿದ್ದರೇ ಹೋರಾಟ ಅನಿವಾರ್ಯ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.</p>.<p>ಪ್ರತ್ಯೇಕ ರಾಜ್ಯದ ಹಕ್ಕೊತ್ತಾಯಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ‘ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಂಘ, ಸಮಾಜ ಬದ್ಧವಾಗಿರುತ್ತೆ’ ಎಂದು ಮಂಜು ತಿಳಿಸಿದರು.</p>.<p>‘ಸಂವಿಧಾನಿಕವಾಗಿ ಮೀಸಲಾತಿ ಹೆಚ್ಚಿಸುವ ಬಗ್ಗೆಯಷ್ಟೇ ಮೈಸೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ಭಾನುವಾರ ಸಭೆ ನಡೆಸಲಾಯಿತು. ನಮ್ಮ ಒತ್ತಾಯ ಮೀಸಲಾತಿ ಹೆಚ್ಚಳದ ಬಗ್ಗೆಯಷ್ಟೇ. ಉಳಿದಂತಹ ಮಹತ್ವದ ನಿರ್ಧಾರಗಳನ್ನುನಿರ್ಮಲಾನಂದನಾಥ ಸ್ವಾಮೀಜಿ ತೆಗೆದುಕೊಳ್ಳಲಿದ್ದಾರೆ’ ಎಂದು ಅವರು<br />ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಒಕ್ಕಲಿಗರಿಗೆ ಪ್ರಸ್ತುತ ಮೀಸಲಾತಿಯಲ್ಲಿ ಶೇ 4ರಷ್ಟು ಮಾತ್ರ ಸಿಗುತ್ತಿದೆ. ಇದನ್ನು ಶೇ 15ಕ್ಕೆ ಹೆಚ್ಚಿಸಬೇಕು ಎಂಬುದು ಸಮುದಾಯದ ಬೇಡಿಕೆಯಾಗಿದೆ’ ಎಂದು ಮೈಸೂರು–ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಮಂಜು ಸೋಮವಾರ ಇಲ್ಲಿ ತಿಳಿಸಿದರು.</p>.<p>‘ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಸೇರಿದಂತೆ ರಾಜ್ಯದ 12 ಜಿಲ್ಲೆಗಳಲ್ಲಿ ಒಕ್ಕಲಿಗರು ಬಲಾಢ್ಯರಾಗಿದ್ದೇವೆ. ಜನಸಂಖ್ಯೆಗನುಗುಣವಾಗಿ ಪ್ರಾತಿನಿಧ್ಯ ಕೇಳುತ್ತಿದ್ದೇವೆ. ಸರ್ಕಾರ ಸ್ಪಂದಿಸದಿದ್ದರೇ ಹೋರಾಟ ಅನಿವಾರ್ಯ’ ಎಂದು ತಮ್ಮನ್ನು ಭೇಟಿಯಾದ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.</p>.<p>ಪ್ರತ್ಯೇಕ ರಾಜ್ಯದ ಹಕ್ಕೊತ್ತಾಯಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ‘ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಸಂಘ, ಸಮಾಜ ಬದ್ಧವಾಗಿರುತ್ತೆ’ ಎಂದು ಮಂಜು ತಿಳಿಸಿದರು.</p>.<p>‘ಸಂವಿಧಾನಿಕವಾಗಿ ಮೀಸಲಾತಿ ಹೆಚ್ಚಿಸುವ ಬಗ್ಗೆಯಷ್ಟೇ ಮೈಸೂರಿನ ಒಕ್ಕಲಿಗ ಸಮುದಾಯ ಭವನದಲ್ಲಿ ಭಾನುವಾರ ಸಭೆ ನಡೆಸಲಾಯಿತು. ನಮ್ಮ ಒತ್ತಾಯ ಮೀಸಲಾತಿ ಹೆಚ್ಚಳದ ಬಗ್ಗೆಯಷ್ಟೇ. ಉಳಿದಂತಹ ಮಹತ್ವದ ನಿರ್ಧಾರಗಳನ್ನುನಿರ್ಮಲಾನಂದನಾಥ ಸ್ವಾಮೀಜಿ ತೆಗೆದುಕೊಳ್ಳಲಿದ್ದಾರೆ’ ಎಂದು ಅವರು<br />ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>