<p><strong>ಮೈಸೂರು:</strong> ಖ್ಯಾತ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್ ಅವರು ಸೃಷ್ಟಿಸಿದ್ದ ವಿಡಂಬನ ಚಿತ್ರಪಾತ್ರ ‘ಕಾಮನ್ ಮ್ಯಾನ್’ನ (ಜನಸಾಮಾನ್ಯ) ಶಿಲ್ಪವನ್ನು ರೈಲ್ವೆ ವಸ್ತುಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದ್ದು, ಗಮನ ಸೆಳೆಯುತ್ತಿದೆ.</p>.<p>ಮೈಸೂರಿನಲ್ಲಿ ಜನಿಸಿದ್ದ ಲಕ್ಷ್ಮಣ್, ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದರು. ಅವರು‘ಕಾಮನ್ ಮ್ಯಾನ್’ಪಾತ್ರವನ್ನು 1951 ರಲ್ಲಿ ಮೊದಲ ಬಾರಿಗೆ ಪರಿಚಯಿಸಿದ್ದರು. ಅವರ ವ್ಯಂಗ್ಯ ಚಿತ್ರಗಳಲ್ಲಿ ಕಾಣಿಸಿಕೊಂಡ ಈ ಪಾತ್ರ ಎಲ್ಲಾ ವಯಸ್ಸಿನ ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ.</p>.<p>ಭಾರತದಲ್ಲಿ ರೈಲ್ವೆಯು ಜನಸಾಮಾನ್ಯರ ಆಶಯ ಮತ್ತು ಆಕಾಂಕ್ಷೆಗಳಿಗಾಗಿಯೇ ಇದೆ. ಸಾಮಾನ್ಯ ಜನರೊಂದಿಗೆ ರೈಲ್ವೆಯ ಸಂಬಂಧವನ್ನು ಬಿಂಬಿಸುವ ಉದ್ದೇಶದೊಂದಿಗೆ ಈ ಶಿಲ್ಪವನ್ನು ಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ವ್ಯವಸ್ಥಾಪಕರಾದ ಅಪರ್ಣಾ ಗರ್ಗ್ ಹೇಳಿದ್ದಾರೆ.</p>.<p>ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ಅವರು ಈ ಶಿಲ್ಪವನ್ನು ಕೆತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಖ್ಯಾತ ವ್ಯಂಗ್ಯಚಿತ್ರಕಾರ ಆರ್.ಕೆ. ಲಕ್ಷ್ಮಣ್ ಅವರು ಸೃಷ್ಟಿಸಿದ್ದ ವಿಡಂಬನ ಚಿತ್ರಪಾತ್ರ ‘ಕಾಮನ್ ಮ್ಯಾನ್’ನ (ಜನಸಾಮಾನ್ಯ) ಶಿಲ್ಪವನ್ನು ರೈಲ್ವೆ ವಸ್ತುಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದ್ದು, ಗಮನ ಸೆಳೆಯುತ್ತಿದೆ.</p>.<p>ಮೈಸೂರಿನಲ್ಲಿ ಜನಿಸಿದ್ದ ಲಕ್ಷ್ಮಣ್, ಮೈಸೂರು ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದರು. ಅವರು‘ಕಾಮನ್ ಮ್ಯಾನ್’ಪಾತ್ರವನ್ನು 1951 ರಲ್ಲಿ ಮೊದಲ ಬಾರಿಗೆ ಪರಿಚಯಿಸಿದ್ದರು. ಅವರ ವ್ಯಂಗ್ಯ ಚಿತ್ರಗಳಲ್ಲಿ ಕಾಣಿಸಿಕೊಂಡ ಈ ಪಾತ್ರ ಎಲ್ಲಾ ವಯಸ್ಸಿನ ಜನರ ಮನಸ್ಸಿನಲ್ಲಿ ಆಳವಾಗಿ ಬೇರೂರಿದೆ.</p>.<p>ಭಾರತದಲ್ಲಿ ರೈಲ್ವೆಯು ಜನಸಾಮಾನ್ಯರ ಆಶಯ ಮತ್ತು ಆಕಾಂಕ್ಷೆಗಳಿಗಾಗಿಯೇ ಇದೆ. ಸಾಮಾನ್ಯ ಜನರೊಂದಿಗೆ ರೈಲ್ವೆಯ ಸಂಬಂಧವನ್ನು ಬಿಂಬಿಸುವ ಉದ್ದೇಶದೊಂದಿಗೆ ಈ ಶಿಲ್ಪವನ್ನು ಸಂಗ್ರಹಾಲಯದಲ್ಲಿ ಸ್ಥಾಪಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ವ್ಯವಸ್ಥಾಪಕರಾದ ಅಪರ್ಣಾ ಗರ್ಗ್ ಹೇಳಿದ್ದಾರೆ.</p>.<p>ಮೈಸೂರು ಮೂಲದ ಕಲಾವಿದ ಅರುಣ್ ಯೋಗಿರಾಜ್ ಅವರು ಈ ಶಿಲ್ಪವನ್ನು ಕೆತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>