ಬೆಳಗಾವಿ: ಮೈಸೂರು ಜಿಲ್ಲೆನಂಜನಗೂಡು ತಾಲ್ಲೂಕಿನ ಕವಲಂದೆ ಗ್ರಾಮದಲ್ಲಿ ಪಾಕ್ ಪರವಾಗಿ ಘೋಷಣೆಗಳನ್ನು ಕೂಗಿರುವವರು ದೇಶದ್ರೋಹಿಗಳು. ಆ ದೇಶದ ಮೇಲೆ ಪ್ರೀತಿ ಇದ್ದವರು ಅಲ್ಲಿಗೆ ಹೋಗಲಿ. ಸರ್ಕಾರವು ಇಂಥ ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕವಲಂದೆ ಚಲೋ ಚಳವಳಿ ನಡೆಸಬೇಕಾಗುತ್ತದೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು.ಇಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, 'ನೀಚರು, ನಿರ್ಲಜ್ಜರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು' ಎಂದು ಒತ್ತಾಯಿಸಿದರು.