<p><strong>ಮೈಸೂರು: </strong>ನಟ ಪುನೀತ್ ರಾಜ್ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು.ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ಆದರೆ ನಿಯಮಗಳನ್ನು ಪರಿಶೀಲನೆ ಮಾಡಿ ನಂತರ ಪ್ರಸ್ತಾವ ಸಿದ್ದಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮಗೂ ಪುನೀತ್ ರಾಜ್ ಕುಮಾರ್ ಬಗ್ಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ ಎಂದರು.</p>.<p>ಎಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯಕ್ಕೆ ಅವರು ಬಾಗಿನ ಸಲ್ಲಿಸಿದರು.</p>.<p>ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಬಾಗಿನ ಅರ್ಪಿಸುವ ಅಂಗಳಕ್ಕೆ ನುಗ್ಗಲು ಯತ್ನ</strong><br />ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸುವ ಅಂಗಳಕ್ಕೆ ಬಿಜೆಪಿಯ ಎಚ್.ಡಿ.ಕೋಟೆ ತಾಲ್ಲೂಕಿನ ಅಧ್ಯಕ್ಷ ಗುರುಸ್ವಾಮಿ ನುಗ್ಗಲು ಯತ್ನಿಸಿದರು.</p>.<p>ಈ ಸಂದರ್ಭ ಅವರನ್ನು ತಡೆದ ಪೊಲೀಸರು ಅತಿಥಿಗೃಹದಲ್ಲಿ ಭೇಟಿ ಮಾಡುವಂತೆ ಸೂಚಿಸಿದರು. ಹೀಗಾಗಿ,ಬಿಜೆಪಿ ಮುಖಂಡರಿಗೇಅವಕಾಶ ನೀಡಿಲ್ಲ ಎಂದು ಗುರುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಟ ಪುನೀತ್ ರಾಜ್ಕುಮಾರ್ ಪದ್ಮಶ್ರೀ ಸೇರಿದಂತೆ ಎಲ್ಲ ಗೌರವಕ್ಕೆ ಅರ್ಹರು.ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಸರ್ವ ಸಮ್ಮತ ಒಪ್ಪಿಗೆ ಇದೆ. ಆದರೆ ನಿಯಮಗಳನ್ನು ಪರಿಶೀಲನೆ ಮಾಡಿ ನಂತರ ಪ್ರಸ್ತಾವ ಸಿದ್ದಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮಗೂ ಪುನೀತ್ ರಾಜ್ ಕುಮಾರ್ ಬಗ್ಗೆ ಅಪಾರ ಗೌರವ ಇದೆ. ಎಲ್ಲವನ್ನು ಪರಿಶೀಲನೆ ಮಾಡುತ್ತೇವೆ ಎಂದರು.</p>.<p>ಎಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಬಳಿಯಿರುವ ಕಬಿನಿ ಜಲಾಶಯಕ್ಕೆ ಅವರು ಬಾಗಿನ ಸಲ್ಲಿಸಿದರು.</p>.<p>ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p><strong>ಬಾಗಿನ ಅರ್ಪಿಸುವ ಅಂಗಳಕ್ಕೆ ನುಗ್ಗಲು ಯತ್ನ</strong><br />ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸುವ ಅಂಗಳಕ್ಕೆ ಬಿಜೆಪಿಯ ಎಚ್.ಡಿ.ಕೋಟೆ ತಾಲ್ಲೂಕಿನ ಅಧ್ಯಕ್ಷ ಗುರುಸ್ವಾಮಿ ನುಗ್ಗಲು ಯತ್ನಿಸಿದರು.</p>.<p>ಈ ಸಂದರ್ಭ ಅವರನ್ನು ತಡೆದ ಪೊಲೀಸರು ಅತಿಥಿಗೃಹದಲ್ಲಿ ಭೇಟಿ ಮಾಡುವಂತೆ ಸೂಚಿಸಿದರು. ಹೀಗಾಗಿ,ಬಿಜೆಪಿ ಮುಖಂಡರಿಗೇಅವಕಾಶ ನೀಡಿಲ್ಲ ಎಂದು ಗುರುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>