‘ಪಕ್ಷವು ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅಭ್ಯರ್ಥಿ ಮಧು ಜಿ.ಮಾದೇಗೌಡ ಗೆಲ್ಲುವ ವಿಶ್ವಾಸವಿದೆ. ಹಿಂದೆಲ್ಲಾ ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿಯೊಬ್ಬರೆ ಇರುತ್ತಿದ್ದರು. ಆದರೆ, ಈ ಬಾರಿ ವರ್ಷಕ್ಕೂ ಮುನ್ನ ತಯಾರಿ ಮಾಡಿಕೊಳ್ಳುವ ಜೊತೆಗೆ ಅಭ್ಯರ್ಥಿ ಹೆಸರನ್ನು ಬೇಗ ಪ್ರಕಟಿಸಲಾಗಿದೆ. ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೊದಲಾದವರು ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ನಾಲ್ಕೂ ಜಿಲ್ಲೆಗಳಲ್ಲೂ ಪಕ್ಷದವರೆಲ್ಲರೂ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ವೈಫಲ್ಯಗಳು ನಮಗೆ ಅನುಕೂಲವಾಗಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.