ಮೈಸೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸೈಲೆಂಟ್ ಶೋರ್ಸ್ ರೆಸಾರ್ಟ್ನಲ್ಲಿ ಬೆಳಿಗ್ಗೆ 9.30 ರಿಂದ ಸಭೆ ನಡೆಯಲಿದೆ. ಮೈಸೂರು, ಚಾಮರಾಜನಗರ, ಕೊಡಗು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಮುಖಂಡರು ಭಾಗವಹಿಸಲಿದ್ದಾರೆ. ರಾಜ್ಯದಾದ್ಯಂತ ಪಕ್ಷ ಸಂಘಟನೆಯ ಉದ್ದೇಶದಿಂದ ಸಭೆ ಆಯೋಜಿಸಲಾಗುತ್ತಿದ್ದು, ಇಂತಹ ಸಭೆ ತುಮಕೂರಿನಲ್ಲಿ ಈಗಾಗಲೇ ನಡೆದಿದೆ. ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಆಯೋಜನೆಯಾಗಿದೆ’ ಎಂದರು.