ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಮಾತನಾಡಿ, ‘ಬಿಜೆಪಿ ಹಳ್ಳಿಗರು, ಕೃಷಿ ಪರವಾದ ಪಕ್ಷ ಎಂಬ ಉಲ್ಲೇಖ ಎಲ್ಲೂ ಇಲ್ಲ. ಇದೊಂದು ವ್ಯಾಪಾರಸ್ಥರ ಪಕ್ಷವಾಗಿದೆ. ರೈತರ ಉತ್ಪಾದನೆಯನ್ನು ದ್ವಿಗುಣಗೊಳಿಸುತ್ತೀನಿ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲೂ ಹೇಳಿಲ್ಲ. ಯಾವ ರೈತರು ಅದರ ಫಲ ಪಡೆದಿಲ್ಲ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ ಇತರ ರಾಜ್ಯಗಳಲ್ಲೂ ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದಾರೆ’ ಎಂದು ಹೇಳಿದರು.