ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಿನಿ ಬಲದಂಡೆ ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ ಕಾನ್‌ಸ್ಟೆಬಲ್ ಶವ ಪತ್ತೆ

Last Updated 17 ಡಿಸೆಂಬರ್ 2019, 10:11 IST
ಅಕ್ಷರ ಗಾತ್ರ

ನಂಜನಗೂಡು: ತಾಲ್ಲೂಕಿನ ಕಳಲೆ ಗ್ರಾಮದ ಬಳಿಯ ಕಬಿನಿ ಬಲದಂಡೆ ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ, ಚಿಕ್ಕಮಗಳೂರು ಜಿಲ್ಲೆ ಕಡೂರು ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಚಿದಾನಂದ್ (30) ದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

ಈಜಲು ಬಿದ್ದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ಮೃತದೇಹವನ್ನು ಈಜುಗಾರರ ತಂಡ ಗುರುತಿಸಿ ಮೇಲೆ ತಂದಿದೆ.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ, ಕಡೂರಿಗೆ ಶವವನ್ನು ಕಳುಹಿಸಿಕೊಡಲಾಯಿತು ಎಂದು ಡಿ.ವೈ.ಎಸ್.ಪಿ. ಪ್ರಭಾಕರ್‌ರಾವ್‌ಸಿಂಧೆ ‘ಪ್ರಜಾವಾಣಿ’ಗೆ ತಿಳಿಸಿದರು.

ಶಬರಿಮಲೆ ಯಾತ್ರೆಗೆ ತೆರಳುತ್ತಿದ್ದ ವೇಳೆ ಚಿದಾನಂದ್ ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT