ಬಳಿಕ ಹುಚ್ಚಗಣಿ, ಹರದನಹಳ್ಳಿ, ಇಬ್ಜಾಲ, ಕಪ್ಪಸೋಗೆ, ಚಂದ್ರವಾಡಿ, ಕಣೇನೂರು ಗ್ರಾಮಗಳ ಗ್ರಾಮಸ್ಥರು ಸಭೆ ಸೇರಿ, ದೇವಾಲಯವನ್ನು ರಾತ್ರೋರಾತ್ರಿ ತೆರವುಗೊಳಿಸಿದ ಅಧಿಕಾರಿಗಳ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ದೇಗುಲವನ್ನು ಪುನರ್ ನಿರ್ಮಾಣ ಮಾಡುವ ಸಂಕಲ್ಪದೊಂದಿಗೆ, ಅದೇ ಸ್ಥಳದಲ್ಲಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪಿಸಿ ಪೂಜೆಯನ್ನು ಪುನರಾರಂಭಿಸಿದರು.