ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಗಾಂಜಾ ವಿರುದ್ಧ ಮುಂದುವರಿದ ಕಾರ್ಯಾಚರಣೆ, 504 ಗಾಂಜಾ ವಶ

ಎನ್.ಆರ್.ಠಾಣೆ ಪೊಲೀಸರಿಂದ ಐವರ ಬಂಧನ
Last Updated 13 ಸೆಪ್ಟೆಂಬರ್ 2020, 8:34 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಟಿಪ್ಪು ವೃತ್ತದಲ್ಲಿ ಗಸ್ತಿನಲ್ಲಿದ್ದ ಎನ್.ಆರ್.ಠಾಣೆ ಇನ್‌ಸ್ಪೆಕ್ಟರ್ ಶೇಖರ್ ಅವರು ಐವರನ್ನು ಬಂಧಿಸಿ, ಅವರಿಂದ 504 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಮದನ್, ಸೈಯ್ಯದ್ ರಿಹಾನ್, ತಬ್ರೀಸ್, ಮಹಮ್ಮದ್ ಅಶ್ರಫ್, ಮಹಮ್ಮದ್ ಅಲಿ ಬಂಧಿತರು.

ಇವರು ಆಟೊದಲ್ಲಿ ಪ್ಲಾಸ್ಟಿಕ್‌ ಕವರ್‌ ಒಳಗೆ ಗಾಂಜಾ ಪೊಟ್ಟಣಗಳನ್ನು ಇಟ್ಟುಕೊಂಡಿದ್ದರು. ಪೊಲೀಸರು ಬರುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ ಇವರನ್ನು ಹಿಡಿದು ತಪಾಸಣೆ ನಡೆಸಿದಾಗ ಗಾಂಜಾ ಪೊಟ್ಟಣಗಳು ಪತ್ತೆಯಾದವು ಎಂದು ಪೊಲೀಸರು ತಿಳಿಸಿದ್ದಾರೆ.‌

ಶುಕ್ರವಾರವಷ್ಟೇ ಮಂಡಿಮೊಹಲ್ಲಾದ ಎಂಕೆಡಿಕೆ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಜುಬೇರ್‌ಖಾನ್ (22) ಎಂಬಾತನನ್ನು ಮಂಡಿ ಪೊಲೀಸರು ಬಂಧಿಸಿದ್ದರೆ, ಗುರುವಾರ ರಾಜೀವ್‌ನಗರದ 1ನೇ ಹಂತದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಬ್ದುಲ್ ರಜೀಕ್‌ ಮತ್ತು ಅಮ್ಮುಖಾನ್ ಎಂಬುವರನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT