ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ‘ಕೊಲಂಬಿಯಾ, ಅಪೊಲೊ ಹಾಗೂ ಜೆಎಸ್ಎಸ್ ಆಸ್ಪತ್ರೆಗಳಿಗೆ ವಿಶೇಷ ವಾರ್ಡ್ ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಸದ್ಯ, ಜಿಲ್ಲೆಯಲ್ಲಿ ಕೊರೊನಾ ಸೋಂಕು ಶಂಕಿತರು ಯಾರೂ ಇಲ್ಲ. ಸಾರ್ವಜನಿಕರು ಊಹಾಪೋಹಾಗಳನ್ನು ನಂಬಬಾರದು’ ಎಂದು ಹೇಳಿದ್ದಾರೆ.