ಮೈಸೂರು: ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಒಬ್ಬ ಸಿಬ್ಬಂದಿ ಮತ್ತು 6 ಮಂದಿ ಕೈದಿಗಳಿಗೆ ಕೊರೊನಾ ಸೋಂಕು ತಗುಲಿದ್ದು, ಆತಂಕ ಮೂಡಿಸಿದೆ. ಹೊರಗಡೆಯಿಂದ ಹೊಸದಾಗಿ ಬರುವ ಕೈದಿಗಳಿಂದಲೇ ಸೋಂಕು ಹರಡುತ್ತಿರುವುದು ಖಚಿತಗೊಂಡಿದೆ. ಹೀಗಾಗಿ, ಹೊಸ ಕೈದಿಗಳಿಗಾಗಿ ಜೈಲಿಂದ ಹೊರಗಡೆ ಪ್ರತ್ಯೇಕ ಕಟ್ಟಡ ಗುರುತಿಸಿಕೊಡುವಂತೆ ಕಾರಾಗೃಹದ ಮುಖ್ಯ ಅಧೀಕ್ಷಕಿ ಕೆ.ಸಿ.ದಿವ್ಯಶ್ರೀ ಅವರು ಜಿಲ್ಲಾಧಿಕಾರಿ ಅಭಿರಾಂ ಜಿ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ.