ಜಿಲ್ಲೆಯಲ್ಲಿ ಮಂಗಳವಾರ ಮತ್ತೆ ಮೂವರು ಕೋವಿಡ್-19 ಕಾಯಿಲೆಗೆ ಒಳಗಾಗಿದ್ದಾರೆ. 37, 27 ಮತ್ತು 33 ವರ್ಷದ ಇವರನ್ನು ಹೊಸ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಇವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ. ಇವರು ನಂಜನಗೂಡಿನ ಔಷಧ ತಯಾರಿಕಾ ಕಾರ್ಖಾನೆಯ ಕೋವಿಡ್ ಪೀಡಿತ ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದವರು.