ಮೈಸೂರು: ನಗರದ ಮಹಾತ್ಮಗಾಂಧಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಾಲಿಕೆ ಅಧಿಕಾರಿಗಳನ್ನು ನಗರಾಭಿವೃದ್ಧಿ ಇಲಾಖೆ ಅಮಾನತುಪಡಿಸಿದೆ.
ವಲಯ ಕಚೇರಿ 1ರಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸುನಿಲ್ ಬಾಬು ಹಾಗೂ ಕಿರಿಯ ಎಂಜಿನಿಯರ್ ಎಂ.ವಿ.ಮೋಹನಕುಮಾರಿ ಅಮಾನತುಗೊಂಡವರು.
ಮಹಾತ್ಮಗಾಂಧಿ ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ಹಿಂದಿನ ವರ್ಷ ನಡೆದಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತೆ ಹೊಸದಾಗಿ ₹ 1.40 ಕೋಟಿ ಬಿಲ್ಲುಗಳನ್ನು ತಯಾರಿಸಿ, ಹಣ ಪಡೆದಿದ್ದರು ಎಂಬ ಆರೋಪ ಇವರ ಮೇಲಿದೆ.