ಮೈಸೂರು: ‘ಇಲ್ಲಿನ ಮಹಾನಗರ ಪಾಲಿಕೆಯ ವಾಣಿ ವಿಲಾಸ ನೀರು ಸರಬರಾಜು ವಿಭಾಗದಲ್ಲಿ ನಾಲ್ವರನ್ನು ಕಾಯಂಗೊಳಿಸಿದ್ದು, ಈ ಪ್ರಕ್ರಿಯೆ ಅಕ್ರಮದಿಂದ ಕೂಡಿದೆ. ಇದರಲ್ಲಿ ಭ್ರಷ್ಟಾಚಾರ ನಡೆದಿದೆ’ ಎಂದು ಮೈಸೂರು ಮಹಾನಗರ ಪಾಲಿಕೆ ವಾಣಿ ವಿಲಾಸ ನೀರು ಸರಬರಾಜು ಮಂಡಳಿ ವರ್ಕರ್ಸ್ ಯೂನಿಯನ್ನ ಅಧ್ಯಕ್ಷ ಎಸ್.ಶಾಂತಪ್ಪ ಸೋಮವಾರ ಇಲ್ಲಿ ದೂರಿದರು.