ಮೈಸೂರು: ವಾರಾಂತ್ಯ ಕರ್ಫ್ಯೂ ವಿರೋಧಿಸಿ ನಗರದಲ್ಲಿ ವ್ಯಾಪಾರಸ್ಥರು ಕಪ್ಪು ಪಟ್ಟಿ ಧರಿಸಿ ಶನಿವಾರ ತಮ್ಮ ತಮ್ಮ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸಿದರು.
ಇಲ್ಲಿನ ಸಂತೇಪೇಟೆ ಹಾಗೂ ದೇವರಾಜ ಅರಸು ರಸ್ತೆಯ ಅಂಗಡಿ ಮಾಲೀಕರು ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದ ನೇತೃತ್ವದಲ್ಲಿ ವಾರಾಂತ್ಯ ಕರ್ಫ್ಯು ತೆಗೆಯಬೇಕು ಎಂದು ಆಗ್ರಹಿಸಿದರು.
ಗಡಿ ಜಿಲ್ಲೆಗಳಲ್ಲಿ ಸರ್ಕಾರ ವಿಧಿಸಿರುವ ವಾರಾಂತ್ಯ ಕರ್ಫ್ಯೂ ಸತತ ಮೂರನೇ ವಾರ ಮುಂದುವರಿದಿದೆ. ಇದಕ್ಕೆ ಹೋಟೆಲ್ ಮಾಲೀಕರು, ಅಂಗಡಿ ಮಾಲೀಕರು ಸೇರಿದಂತೆ ಹಲವು ವ್ಯಾಪಾರಸ್ಥರು ವಿರೋಧಿಸಿದ್ದಾರೆ.