ಹೀಗಾಗಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಕೋಪ ನಿರ್ವಹಣೆ ಕಾಯ್ದೆ ಪ್ರಯೋಗಿಸಿ ಕಡಕೊಳ ಕೈಗಾರಿಕಾ ಪ್ರದೇಶದ ತ್ರಿನೇತ್ರ ಗ್ಯಾಸಸ್ನಲ್ಲಿದ್ದ ಸೌಲಭ್ಯವನ್ನು ಜಿಲ್ಲಾಡಳಿತದ ಸುಪರ್ದಿಗೆ ಪಡೆದಿದ್ದಾರೆ. ಅಲ್ಲದೇ, ಇಲ್ಲಿನ 20ಕೆಎಲ್ ಸಾಮರ್ಥ್ಯದ ಆಮ್ಲಜನಕ ಘಟಕದಲ್ಲಿ ಶೇಖರಿಸಲು ವ್ಯವಸ್ಥೆ ಕಲ್ಪಿಸಿದ್ದಾರೆ.