ಶಾಲೆ ಬಂದ್ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್, ‘ಬೆಂಗಳೂರು, ಬೆಳಗಾವಿ ಬಿಟ್ಟು ಬೇರೆಡೆ ಶಾಲಾ ತರಗತಿಗಳನ್ನು ಬಂದ್ ಮಾಡುವ ಪ್ರಸ್ತಾವ ಸದ್ಯಕ್ಕೆ ಇಲ್ಲ. ಅಲ್ಲದೆ, ಬೆಂಗಳೂರಿನಲ್ಲಿ ಶಾಲೆಗಳ ರಜೆ ವಿಸ್ತರಿಸುವ ಕುರಿತು ಶೀಘ್ರದಲ್ಲಿ ನಿರ್ಧರಿಸಲಾಗುವುದು’ ಎಂದಿದ್ದಾರೆ.