<p><strong>ಮೈಸೂರು:</strong> ಮೈಸೂರು ಹೊರವಲಯದ ಮಂಡಕಳ್ಳಿಯಲ್ಲಿರುವ ಕೆಎಸ್ಒಯು ಅಕಾಡೆಮಿಕ್ ಕಟ್ಟಡದಲ್ಲಿ 600 ಹಾಸಿಗೆ ವ್ಯವಸ್ಥೆ ಮಾಡಿದ ಬೆನ್ನಲ್ಲೇ, ಚಾಮುಂಡಿ ವಿಹಾರದ ಒಳಾಂಗಣ ಕ್ರೀಡಾಂಗಣದಲ್ಲಿ ‘ಕೋವಿಡ್ ಕೇರ್ ಕೇಂದ್ರ’ ಸ್ಥಾಪಿಸಲು ಸಿದ್ಧತೆ ನಡೆದಿದೆ.</p>.<p>ಒಳಾಂಗಣ ಕ್ರೀಡಾಂಗಣದಲ್ಲಿ ಸುಮಾರು 800 ಹಾಸಿಗೆಗಳ ಸೌಲಭ್ಯ ಕಲ್ಪಿಸುವ ಚಿಂತನೆಯಲ್ಲಿ ಜಿಲ್ಲಾಡಳಿತವಿದೆ. ರೋಗ ಲಕ್ಷಣವಿಲ್ಲದವರಿಗೆ ಈ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಕಾರಣ ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಂಡಿದೆ.</p>.<p>ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ, ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು ತಂಗಲೂ ಇಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.</p>.<p>‘ಕೋವಿಡ್ ಕೇರ್ ಕೇಂದ್ರವಾಗಿ ಚಾಮುಂಡಿ ವಿಹಾರದ ಒಳಾಂಗಣ ಕ್ರೀಡಾಂಗಣವನ್ನು ಪರಿವರ್ತಿಸಲಾಗುತ್ತಿದೆ. ಆರು ದಿನಗಳಲ್ಲಿ ಸಿದ್ಧಪಡಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸದ್ಯ ಜಿಲ್ಲೆಯಲ್ಲಿ ಸುಮಾರು 3,500 ಹಾಸಿಗೆಗಳ ಸೌಲಭ್ಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ಹೊರವಲಯದ ಮಂಡಕಳ್ಳಿಯಲ್ಲಿರುವ ಕೆಎಸ್ಒಯು ಅಕಾಡೆಮಿಕ್ ಕಟ್ಟಡದಲ್ಲಿ 600 ಹಾಸಿಗೆ ವ್ಯವಸ್ಥೆ ಮಾಡಿದ ಬೆನ್ನಲ್ಲೇ, ಚಾಮುಂಡಿ ವಿಹಾರದ ಒಳಾಂಗಣ ಕ್ರೀಡಾಂಗಣದಲ್ಲಿ ‘ಕೋವಿಡ್ ಕೇರ್ ಕೇಂದ್ರ’ ಸ್ಥಾಪಿಸಲು ಸಿದ್ಧತೆ ನಡೆದಿದೆ.</p>.<p>ಒಳಾಂಗಣ ಕ್ರೀಡಾಂಗಣದಲ್ಲಿ ಸುಮಾರು 800 ಹಾಸಿಗೆಗಳ ಸೌಲಭ್ಯ ಕಲ್ಪಿಸುವ ಚಿಂತನೆಯಲ್ಲಿ ಜಿಲ್ಲಾಡಳಿತವಿದೆ. ರೋಗ ಲಕ್ಷಣವಿಲ್ಲದವರಿಗೆ ಈ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತದೆ. ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಕಾರಣ ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಂಡಿದೆ.</p>.<p>ಮಹಿಳೆಯರು ಹಾಗೂ ಪುರುಷರಿಗೆ ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ, ಕೊರೊನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು ತಂಗಲೂ ಇಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ.</p>.<p>‘ಕೋವಿಡ್ ಕೇರ್ ಕೇಂದ್ರವಾಗಿ ಚಾಮುಂಡಿ ವಿಹಾರದ ಒಳಾಂಗಣ ಕ್ರೀಡಾಂಗಣವನ್ನು ಪರಿವರ್ತಿಸಲಾಗುತ್ತಿದೆ. ಆರು ದಿನಗಳಲ್ಲಿ ಸಿದ್ಧಪಡಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಸದ್ಯ ಜಿಲ್ಲೆಯಲ್ಲಿ ಸುಮಾರು 3,500 ಹಾಸಿಗೆಗಳ ಸೌಲಭ್ಯವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>