ಮೈಸೂರು: ‘ಕೋವಿಡ್ ಕರ್ತವ್ಯದಲ್ಲಿದ್ದಾಗ ಸೋಂಕು ತಗುಲಿ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟವರಿಗೆ ₹ 50 ಲಕ್ಷ ಪರಿಹಾರ ಕೊಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಆದರೆ ಪರಿಹಾರ ತಲುಪಿರುವುದು ಬೆರಳೆಣಿಕೆಯಷ್ಟು ಜನರಿಗೆ ಮಾತ್ರ. ಸರ್ಕಾರ ಬೇಜವಾಬ್ದಾರಿತನದಿಂದ ವರ್ತಿಸುತ್ತಿದೆ’ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದರು.