<p class="rtejustify"><strong>ಮೈಸೂರು: </strong>ಇಲ್ಲಿನ ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ಕಚೇರಿಯು 18ರಿಂದ 44 ವರ್ಷದಗೊಳಗಿನ ಸಿಬ್ಬಂದಿಗೆ ಅವರು ಕೆಲಸ ಮಾಡುವ ಸ್ಥಳದಲ್ಲೇ ಕೋವಿಡ್ ಲಸಿಕೆ ಹಾಕುವ ಅಭಿಯಾನ ಆರಂಭಿಸಿದೆ.</p>.<p class="rtejustify">ಈವರೆಗೆ ಶೇ 79ರಷ್ಟು ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಉಳಿದ ಸಿಬ್ಬಂದಿಗೆ ಕೆಲಸದ ಸ್ಥಳದಲ್ಲೇ ಲಸಿಕೆ ಹಾಕಲು ನಿರ್ಧರಿಸಲಾಗಿದೆ.</p>.<p class="rtejustify">ಸುಮಾರು 2 ಸಾವಿರ ಸಿಬ್ಬಂದಿ ಹೊಂದಿರುವ ಅಶೋಕಪುರಂ ಕಾರ್ಯಾಗಾರದಲ್ಲಿಯೂ ಕೆಲಸದ ಸ್ಥಳದಲ್ಲೇ ಸಿಬ್ಬಂದಿಗೆ ಲಸಿಕೆ ಹಾಕಲಾಗುತ್ತಿದೆ. ಈಗಾಗಲೇ ಇಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ 576 ಉದ್ಯೋಗಿಗಳ ಪೈಕಿ 550ಕ್ಕೂ ಹೆಚ್ಚು ಜನರು ಲಸಿಕೆ ಪಡೆದಿದ್ದಾರೆ.</p>.<p class="rtejustify">ಸಿಬ್ಬಂದಿಯ ಅನುಕೂಲಕ್ಕಾಗಿ ಚಿಕ್ಕಜಾಜೂರು ಮತ್ತು ಹರಿಹರ ರೈಲ್ವೆ ನಿಲ್ದಾಣಗಳಲ್ಲಿ ಸಹ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ.</p>.<p class="rtejustify">‘ಕೋವಿಡ್ 2ನೇ ಅಲೆ ಇನ್ನೂ ಮುಗಿದಿಲ್ಲ. ಹಾಗಾಗಿ ಯಾರೂ ನಿರ್ಲಕ್ಷ್ಯ ವಹಿಸಬಾರದು’ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ತಿಳಿಸಿದ್ದಾರೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ.ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="rtejustify"><strong>ಮೈಸೂರು: </strong>ಇಲ್ಲಿನ ನೈರುತ್ಯ ರೈಲ್ವೆಯ ಮೈಸೂರು ವಿಭಾಗೀಯ ಕಚೇರಿಯು 18ರಿಂದ 44 ವರ್ಷದಗೊಳಗಿನ ಸಿಬ್ಬಂದಿಗೆ ಅವರು ಕೆಲಸ ಮಾಡುವ ಸ್ಥಳದಲ್ಲೇ ಕೋವಿಡ್ ಲಸಿಕೆ ಹಾಕುವ ಅಭಿಯಾನ ಆರಂಭಿಸಿದೆ.</p>.<p class="rtejustify">ಈವರೆಗೆ ಶೇ 79ರಷ್ಟು ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಉಳಿದ ಸಿಬ್ಬಂದಿಗೆ ಕೆಲಸದ ಸ್ಥಳದಲ್ಲೇ ಲಸಿಕೆ ಹಾಕಲು ನಿರ್ಧರಿಸಲಾಗಿದೆ.</p>.<p class="rtejustify">ಸುಮಾರು 2 ಸಾವಿರ ಸಿಬ್ಬಂದಿ ಹೊಂದಿರುವ ಅಶೋಕಪುರಂ ಕಾರ್ಯಾಗಾರದಲ್ಲಿಯೂ ಕೆಲಸದ ಸ್ಥಳದಲ್ಲೇ ಸಿಬ್ಬಂದಿಗೆ ಲಸಿಕೆ ಹಾಕಲಾಗುತ್ತಿದೆ. ಈಗಾಗಲೇ ಇಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ 576 ಉದ್ಯೋಗಿಗಳ ಪೈಕಿ 550ಕ್ಕೂ ಹೆಚ್ಚು ಜನರು ಲಸಿಕೆ ಪಡೆದಿದ್ದಾರೆ.</p>.<p class="rtejustify">ಸಿಬ್ಬಂದಿಯ ಅನುಕೂಲಕ್ಕಾಗಿ ಚಿಕ್ಕಜಾಜೂರು ಮತ್ತು ಹರಿಹರ ರೈಲ್ವೆ ನಿಲ್ದಾಣಗಳಲ್ಲಿ ಸಹ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ.</p>.<p class="rtejustify">‘ಕೋವಿಡ್ 2ನೇ ಅಲೆ ಇನ್ನೂ ಮುಗಿದಿಲ್ಲ. ಹಾಗಾಗಿ ಯಾರೂ ನಿರ್ಲಕ್ಷ್ಯ ವಹಿಸಬಾರದು’ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ತಿಳಿಸಿದ್ದಾರೆ ಎಂದು ಹಿರಿಯ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಡಾ.ಮಂಜುನಾಥ್ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>