‘ಬಡವರು, ಕಾರ್ಮಿಕರು, ರೈತರಿಗೆ ತಿಂಗಳಿಗೆ ₹ 7,500ರಂತೆ ಆರು ತಿಂಗಳು ನೀಡಬೇಕು. ಪ್ರತಿ ವ್ಯಕ್ತಿಗೆ 10 ಕೆ.ಜಿಯಂತೆ ಆರು ತಿಂಗಳವರೆಗೆ ಉಚಿತ ಆಹಾರ ಧಾನ್ಯ ವಿತರಿಸಬೇಕು. ಉದ್ಯೋಗ ಖಾತ್ರಿ ಅಡಿಯಲ್ಲಿ ನೀಡುತ್ತಿರುವ ಕೂಲಿ ಹೆಚ್ಚಿಸಬೇಕು. ನಗರದ ಬಡವರಿಗೂ ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಬೇಕು. ನಿರುದ್ಯೋಗಿಗಳಿಗೆ ತಕ್ಷಣವೇ ನಿರುದ್ಯೋಗ ಭತ್ಯೆ ಪ್ರಕಟಿಸಬೇಕು’ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಬಸವರಾಜು ಆಗ್ರಹಿಸಿದರು.