ಕೋವಿಡ್ನಿಂದ ತೀರಾ ಸಂಕಷ್ಟಕ್ಕೆ ಒಳಗಾಗಿರುವ ಈ ಸಂದರ್ಭದಲ್ಲಿ ಕಲಾವಿದರಿಗೆ ಹೆಚ್ಚಿನ ಗೌರವ ಸಂಭಾವನೆ ನೀಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರನ್ನು ಆಯ್ಕೆ ಮಾಡಬೇಕು. ದಸರಾದಲ್ಲಿ ಭಾಗವಹಿಸುವ ಸಾಹಿತಿ, ಕಲಾವಿದರಿಗೆ ವಸತಿ, ಊಟ ಮತ್ತು ಸಾರಿಗೆ ಸೌಕರ್ಯ ಒದಗಿಸಬೇಕು. ಜೊತೆಗೆ ದಸರಾ ರಾಷ್ಟ್ರೀಯ ಹಬ್ಬ ಆಗಿರುವುದರಿಂದ ಪ್ರತಿ ವರ್ಷವೂ ವ್ಯವಸ್ಥಿತವಾಗಿ ಆಚರಿಸಲು ದಸರಾ ಪ್ರಾಧಿಕಾರ ರಚಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.