‘ಕೊಡಗಿನ ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಪರಿಚಯವಾಗಿದ್ದ ನೇರಳೆ ಗ್ರಾಮದ ವಿಷ್ಣುನನ್ನು ನ.25ರಂದು ನೋಡಿದೆ. ಮನೆಗೆ ಕರೆದಿದ್ದರಿಂದ ಟೀ ಕುಡಿಯಲು ಬಂದಿದ್ದರು. ಈ ವೇಳೆ ಏಕಾಏಕಿ ಮನೆಗೆ ನುಗ್ಗಿದ ಪತಿ ರವಿ ಹಾಗೂ ಮೈದುನ ಚಂದ್ರಇಬ್ಬರ ಮೇಲೂ ದೈಹಿಕ ಹಲ್ಲೆ ನಡೆಸಿದ್ದಲ್ಲದೇ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದರು.ತಡರಾತ್ರಿ ಕಂಬದಿಂದ ಬಿಡಿಸಿ ಸಿದ್ದಪ್ಪಾಜಿ ದೇಗುಲದಲ್ಲಿ ಕೂಡಿಹಾಕಿದ್ದರು. ಇಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಮಹಿಳೆ ದೂರಿನಲ್ಲಿ ಆಗ್ರಹಿಸಿದ್ದಾರೆ.