<p><strong>ಮೈಸೂರು:</strong> ‘ಬಿಜೆಪಿಯ ಒಳ್ಳೆಯ ಕೆಲಸವನ್ನು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಬೆಂಬಲಿಸಿದ್ದಾರೆ. ಆದರೆ, ರಾಜಕೀಯ ಕಾರಣಕ್ಕಾಗಿ ಅವರನ್ನು ಟೀಕಿಸುವುದು ಸಣ್ಣತನ’ ಎಂದು ಸಂಸದ ಪ್ರತಾಪಸಿಂಹ ಅವರು, ಕುಮಾರಸ್ವಾಮಿಯವರನ್ನು ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡಿದರು.</p>.<p>ವಿಧಾನ ಪರಿಷತ್ನಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜಾತ್ಯತೀತ ಜನತಾದಳ ಬೆಂಬಲ ಸೂಚಿಸಿದ ವಿಚಾರವಾಗಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ‘ಎಚ್.ಡಿ.ಕುಮಾರಸ್ವಾಮಿ 20-20 ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲ ಮನ್ನಾದಂತಹ ರೈತ ಪರ ಕಾರ್ಯಕ್ರಮ ನೀಡಿದ್ದಾರೆ’ ಎಂದು ಪ್ರಶಂಸಿಸಿದರು.</p>.<p>‘ಕುಮಾರಸ್ವಾಮಿ ರೈತನ ಮಗ. ಹೀಗಾಗಿ, ರೈತರು ಹಾಗೂ ಗೋವಿನ ಬಗ್ಗೆ ಅವರಿಗೆ ಗೊತ್ತಿದೆ. ಇದೇ ಕಾರಣಕ್ಕೆ ಅವರು ಬಿಜೆಪಿ ಜಾರಿಗೊಳಿಸಲುದ್ದೇಶಿಸಿರುವ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಅವರನ್ನು ಟೀಕೆ ಮಾಡುವುದು ಸರಿಯಲ್ಲ’ ಎಂದು ಎಚ್ಡಿಕೆ ನಿಲುವನ್ನು ಪ್ರತಾಪಸಿಂಹ ಬೆಂಬಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಬಿಜೆಪಿಯ ಒಳ್ಳೆಯ ಕೆಲಸವನ್ನು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಬೆಂಬಲಿಸಿದ್ದಾರೆ. ಆದರೆ, ರಾಜಕೀಯ ಕಾರಣಕ್ಕಾಗಿ ಅವರನ್ನು ಟೀಕಿಸುವುದು ಸಣ್ಣತನ’ ಎಂದು ಸಂಸದ ಪ್ರತಾಪಸಿಂಹ ಅವರು, ಕುಮಾರಸ್ವಾಮಿಯವರನ್ನು ಟೀಕಿಸುತ್ತಿರುವ ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡಿದರು.</p>.<p>ವಿಧಾನ ಪರಿಷತ್ನಲ್ಲಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ಜಾತ್ಯತೀತ ಜನತಾದಳ ಬೆಂಬಲ ಸೂಚಿಸಿದ ವಿಚಾರವಾಗಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ‘ಎಚ್.ಡಿ.ಕುಮಾರಸ್ವಾಮಿ 20-20 ಸರ್ಕಾರದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲ ಮನ್ನಾದಂತಹ ರೈತ ಪರ ಕಾರ್ಯಕ್ರಮ ನೀಡಿದ್ದಾರೆ’ ಎಂದು ಪ್ರಶಂಸಿಸಿದರು.</p>.<p>‘ಕುಮಾರಸ್ವಾಮಿ ರೈತನ ಮಗ. ಹೀಗಾಗಿ, ರೈತರು ಹಾಗೂ ಗೋವಿನ ಬಗ್ಗೆ ಅವರಿಗೆ ಗೊತ್ತಿದೆ. ಇದೇ ಕಾರಣಕ್ಕೆ ಅವರು ಬಿಜೆಪಿ ಜಾರಿಗೊಳಿಸಲುದ್ದೇಶಿಸಿರುವ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಅವರನ್ನು ಟೀಕೆ ಮಾಡುವುದು ಸರಿಯಲ್ಲ’ ಎಂದು ಎಚ್ಡಿಕೆ ನಿಲುವನ್ನು ಪ್ರತಾಪಸಿಂಹ ಬೆಂಬಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>