<p><strong>ಮೈಸೂರು:</strong>‘ಪೆಗಾಸಸ್ ಗೂಢಚಾರಿಕೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಮುರಿದು ಮಾತಾಡಬೇಕು’ ಎಂದು ಕೆಪಿಸಿಸಿ ವಕ್ತಾರ ಪ್ರೊ.ಬಿ.ಕೆ.ಚಂದ್ರಶೇಖರ್ ಒತ್ತಾಯಿಸಿದರು.</p>.<p>‘ಭಯೋತ್ಪಾದಕರ ಮೇಲೆ ಗೂಢಚಾರಿಕೆ ನಡೆಯಬೇಕೇ ಹೊರತು ರಾಜಕಾರಣಿಗಳು ಹಾಗೂ ಪತ್ರಕರ್ತರ ಮೇಲಲ್ಲ. ಆ ಬಗ್ಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಫ್ರಾನ್ಸ್ ಅಧ್ಯಕ್ಷರು ಈ ಬಗ್ಗೆ ಈಗಾಗಲೇ ತನಿಖೆ ನಡೆಸಿದ್ದಾರೆ. ವರದಿ ಕೊಡುವಂತೆ ಇಸ್ರೇಲ್ ಪ್ರಧಾನಿಗೂ ಹೇಳಿದ್ದಾರೆ. ಆದರೆ, ನರೇಂದ್ರ ಮೋದಿ ಮಾತ್ರ ಸುಮ್ಮನಿದ್ದಾರೆ’ ಎಂದು ಅವರು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಿಡಿ ಕಾರಿದರು.</p>.<p>‘ನರೇಂದ್ರ ಮೋದಿ 7 ವರ್ಷದಲ್ಲಿ ಪತ್ರಿಕಾಗೋಷ್ಠಿಯನ್ನೇ ನಡೆಸದೇ ತಮ್ಮ ವೈಫಲ್ಯಗಳನ್ನು ಮುಚ್ಚಿಡುತ್ತಿದ್ದಾರೆ. ಒಂದು ವೇಳೆ ಅವರಿಗೆ ಪತ್ರಿಕಾಗೋಷ್ಠಿ ನಡೆಸಲು ಭಯವಿದ್ದರೆ, ಪತ್ರಿಕಾಗೋಷ್ಠಿ ನಡೆಸಲೆಂದೇ ಉಪಪ್ರಧಾನಿಯೊಬ್ಬರನ್ನು ನೇಮಿಸಿಕೊಳ್ಳಲಿ’ ಎಂದು ಸಲಹೆ ನೀಡಿದರು.</p>.<p>‘ಕೋವಿಡ್ ಲಸಿಕೆಗಾಗಿ ಜನ ಪರದಾಡುತ್ತಿದ್ದಾರೆ. ಶೇ 5.50ರಷ್ಟು ಮಂದಿಗೆ ಮಾತ್ರ ಲಸಿಕೆ ದೊರೆತಿದೆ. ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಸಿಗುವುದು ಕಷ್ಟಸಾಧ್ಯ. ಹೀಗಿದ್ದರೂ, ನರೇಂದ್ರ ಮೋದಿ ಲಸಿಕೆಯ ಪ್ರಮಾಣಪತ್ರದಲ್ಲೂ ತಮ್ಮ ಚಿತ್ರ ಹಾಕಿಕೊಂಡಿರುವುದು ನಾಚಿಕೆಗೇಡು’ ಎಂದು ಚಾಟಿ ಬೀಸಿದರು.</p>.<p>‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ಎಲ್ಲವೂ ಸರಿ ಹೋಗುವುದಿಲ್ಲ. ಹಣಕಾಸು ಇಲಾಖೆಗೆ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಬೇಕು. ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong>‘ಪೆಗಾಸಸ್ ಗೂಢಚಾರಿಕೆ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಮುರಿದು ಮಾತಾಡಬೇಕು’ ಎಂದು ಕೆಪಿಸಿಸಿ ವಕ್ತಾರ ಪ್ರೊ.ಬಿ.ಕೆ.ಚಂದ್ರಶೇಖರ್ ಒತ್ತಾಯಿಸಿದರು.</p>.<p>‘ಭಯೋತ್ಪಾದಕರ ಮೇಲೆ ಗೂಢಚಾರಿಕೆ ನಡೆಯಬೇಕೇ ಹೊರತು ರಾಜಕಾರಣಿಗಳು ಹಾಗೂ ಪತ್ರಕರ್ತರ ಮೇಲಲ್ಲ. ಆ ಬಗ್ಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಫ್ರಾನ್ಸ್ ಅಧ್ಯಕ್ಷರು ಈ ಬಗ್ಗೆ ಈಗಾಗಲೇ ತನಿಖೆ ನಡೆಸಿದ್ದಾರೆ. ವರದಿ ಕೊಡುವಂತೆ ಇಸ್ರೇಲ್ ಪ್ರಧಾನಿಗೂ ಹೇಳಿದ್ದಾರೆ. ಆದರೆ, ನರೇಂದ್ರ ಮೋದಿ ಮಾತ್ರ ಸುಮ್ಮನಿದ್ದಾರೆ’ ಎಂದು ಅವರು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕಿಡಿ ಕಾರಿದರು.</p>.<p>‘ನರೇಂದ್ರ ಮೋದಿ 7 ವರ್ಷದಲ್ಲಿ ಪತ್ರಿಕಾಗೋಷ್ಠಿಯನ್ನೇ ನಡೆಸದೇ ತಮ್ಮ ವೈಫಲ್ಯಗಳನ್ನು ಮುಚ್ಚಿಡುತ್ತಿದ್ದಾರೆ. ಒಂದು ವೇಳೆ ಅವರಿಗೆ ಪತ್ರಿಕಾಗೋಷ್ಠಿ ನಡೆಸಲು ಭಯವಿದ್ದರೆ, ಪತ್ರಿಕಾಗೋಷ್ಠಿ ನಡೆಸಲೆಂದೇ ಉಪಪ್ರಧಾನಿಯೊಬ್ಬರನ್ನು ನೇಮಿಸಿಕೊಳ್ಳಲಿ’ ಎಂದು ಸಲಹೆ ನೀಡಿದರು.</p>.<p>‘ಕೋವಿಡ್ ಲಸಿಕೆಗಾಗಿ ಜನ ಪರದಾಡುತ್ತಿದ್ದಾರೆ. ಶೇ 5.50ರಷ್ಟು ಮಂದಿಗೆ ಮಾತ್ರ ಲಸಿಕೆ ದೊರೆತಿದೆ. ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಸಿಗುವುದು ಕಷ್ಟಸಾಧ್ಯ. ಹೀಗಿದ್ದರೂ, ನರೇಂದ್ರ ಮೋದಿ ಲಸಿಕೆಯ ಪ್ರಮಾಣಪತ್ರದಲ್ಲೂ ತಮ್ಮ ಚಿತ್ರ ಹಾಕಿಕೊಂಡಿರುವುದು ನಾಚಿಕೆಗೇಡು’ ಎಂದು ಚಾಟಿ ಬೀಸಿದರು.</p>.<p>‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ತಕ್ಷಣ ಎಲ್ಲವೂ ಸರಿ ಹೋಗುವುದಿಲ್ಲ. ಹಣಕಾಸು ಇಲಾಖೆಗೆ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಬೇಕು. ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>