ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ದೊರೆಸ್ವಾಮಿ, ‘ಎಪಿಎಂಸಿಯಲ್ಲಿ ಸೂಕ್ತ ಬೆಲೆ ಸಿಗುತ್ತಿಲ್ಲ. ಕಟಾವು ಮಾಡಿ, ಸರಕುಸಾಗಣೆ ವಾಹನದಲ್ಲಿ ಸಾಗಿಸುವ ವೆಚ್ಚವೂ ಸಿಗುತ್ತಿಲ್ಲ. ಹೀಗಾಗಿ, ಬೆಳೆಗೆ ಕುರಿಗಳನ್ನು ಬಿಟ್ಟು ಮೇಯಿಸಿದ್ದೇನೆ. ಇನ್ನು ಒಂದೂವರೆ ಎಕರೆ ಪ್ರದೇಶದಲ್ಲಿ ಟೊಮೆಟೊ ಇದೆ. ಏನಾಗುವುದೋ ಗೊತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.