ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): ತಾಲ್ಲೂಕಿನ ಕಾಡಂಚಿನ ಗ್ರಾಮ ಬೂದನೂರಿಗೆ ಸಲಗವೊಂದು ಸೋಮವಾರ ಬೆಳಿಗ್ಗೆ ನುಗ್ಗಿದ್ದು, ಹಲವು ಮನೆಗಳಿಗೆ ಹಾನಿ ಮಾಡಿದೆ. ಅದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಥಳಿಸಿದ್ದಾರೆ.ಗನ್ ಅನ್ನು ಕೂಡ ಮುರಿದು ಹಾಕಿದ್ದಾರೆ.
ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಗೆ ಅರಣ್ಯ ಇಲಾಖೆ ದೂರು ನೀಡಿದೆ.
ವಿಡಿಯೊ ವೈರಲ್:ಕಲ್ಲುಗಳನ್ನು ಆನೆಯತ್ತ ಎಸೆದು ಗ್ರಾಮದಿಂದ ಹೊರವಲಯಕ್ಕೆ ಅಟ್ಟಲು ಜನರು ಗುಂಪಾಗಿ ಸಾಗುತ್ತಿರುವ ವಿಡಿಯೊ ವೈರಲ್ ಆಗಿದೆ. ಜನರ ಕೂಗಾಟ ಮತ್ತು ಚೀರಾಟದಿಂದ ಸಲಗವುಗಾಬರಿಯಾಗಿ ಬೀದಿಗಳಲ್ಲಿ ಸುತ್ತಾಡಿರುವ ದೃಶ್ಯವೂ ಸೆರೆಯಾಗಿದೆ.
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಪಟಾಕಿ ಸಿಡಿಸಿ ಸಲಗವನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.