‘ಗ್ರಾಮದ ಮಹಿಳೆಯೊಬ್ಬರ ಮನೆಯ ಮುಂದೆ ಶನಿವಾರ ರಾತ್ರಿ ಇವರು ಅತಿಯಾಗಿ ಮದ್ಯಪಾನ ಮಾಡಿ ಗಲಾಟೆ ಮಾಡಿದ್ದರು. ಪೊಲೀಸ್ ಸಹಾಯವಾಣಿ 112ಗೆ ಮಹಿಳೆ ಕರೆ ಮಾಡಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಸಿದ್ಧರಾಜು ಅವರನ್ನು ವಶಕ್ಕೆ ಪಡೆದಿದ್ದರು. ಭಾನುವಾರ ಮಧ್ಯಾಹ್ನ ಗ್ರಾಮಾಂತರ ಠಾಣೆಯಲ್ಲಿದ್ದ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟರು. ಮೃತರ ಸಂಬಂಧಿಕರು ನೀಡುವ ದೂರನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದ್ದಾರೆ.