ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಂಜನಗೂಡು: ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು

Last Updated 29 ನವೆಂಬರ್ 2021, 5:29 IST
ಅಕ್ಷರ ಗಾತ್ರ

ನಂಜನಗೂಡು: ಗ್ರಾಮಾಂತರ ಪೊಲೀಸರ ವಶದಲ್ಲಿದ್ದ ತಾಲ್ಲೂಕಿನ ಬ್ಯಾಳ್ಯಾರು ಗ್ರಾಮದ ಸಿದ್ಧರಾಜು (31) ಭಾನುವಾರ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಸಾವಿಗೆ ಮಹಿಳೆ ಹಾಗೂ ಆಕೆಯ ಸಂಬಂಧಿಕರು ಹಲ್ಲೆ ನಡೆಸಿರುವುದೇ ಕಾರಣ ಎಂದು ಮೃತ ಸಿದ್ದರಾಜು ಅವರ ತಂದೆ ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

‘ಗ್ರಾಮದ ಮಹಿಳೆಯೊಬ್ಬರ ಮನೆಯ ಮುಂದೆ ಶನಿವಾರ ರಾತ್ರಿ ಇವರು ಅತಿಯಾಗಿ ಮದ್ಯಪಾನ ಮಾಡಿ ಗಲಾಟೆ ಮಾಡಿದ್ದರು. ಪೊಲೀಸ್ ಸಹಾಯವಾಣಿ 112ಗೆ ಮಹಿಳೆ ಕರೆ ಮಾಡಿ ಸಹಾಯ ಮಾಡುವಂತೆ ಮನವಿ ಮಾಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಸಿದ್ಧರಾಜು ಅವರನ್ನು ವಶಕ್ಕೆ ಪಡೆದಿದ್ದರು. ಭಾನುವಾರ ಮಧ್ಯಾಹ್ನ ಗ್ರಾಮಾಂತರ ಠಾಣೆಯಲ್ಲಿದ್ದ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟರು. ಮೃತರ ಸಂಬಂಧಿಕರು ನೀಡುವ ದೂರನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT