<p><strong>ಹುಣಸೂರು</strong>: 66ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯ ಇಲಾಖೆ ಹಮ್ಮಿಕೊಂಡಿರುವ ರಣಹದ್ದುಗಳು ಭವಿಷ್ಯಕ್ಕಾಗಿ ಜಾಥಾ ಮತ್ತು ಅರಿವು ಸೈಕಲ್ ಜಾಥಾಕ್ಕೆ ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಿದರು.</p>.<p>‘ರಾಜ್ಯದಾದ್ಯಂತ ಅ. 2ರಿಂದ 8ರವರಗೆ ನಡೆಯಲಿರುವ ಸಪ್ತಾಹದಲ್ಲಿ ಆನೆ ಚಲನವಲನ ಪಥ ಸಂರಕ್ಷಣೆ ವಿಷಯವನ್ನು ಕೇಂದ್ರೀಕೃತವಾಗಿ ಅರಣ್ಯದಂಚಿನ ನಾಗರಿಕರಲ್ಲಿ ಅರಿವು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಮುತ್ತೋಡಿಯಿಂದ ಬೆಂಗಳೂರುವರೆಗೆ ಸೈಕಲ್ ಜಾಥಾ ನಡೆದಿದೆ’ ಎಂದರು.</p>.<p>ಜಾಥಾ ಅ. 4ರಂದು ನಾಗರಹೊಳೆ ತಲುಪಿ, ಅ. 5ರಂದು ಮೈಸೂರು ಮಾರ್ಗವಾಗಿಬೆಂಗಳೂರಿನತ್ತ ತೆರಳಿತು.</p>.<p class="Subhead"><strong>ಆನ್ ಲೈನ್ ಸ್ಪರ್ಧೆ:</strong> ಅರಣ್ಯದಲ್ಲಿ ವಿವಿಧ ಸೂಕ್ಷ್ಮ ಪ್ರಾಣಿ ಪಕ್ಷಿಗಳ ಕುರಿತು ಅರಿವು ಮೂಡಿಸುವ ಕೆಲಸವನ್ನು ವಿವಿಧ ರೀತಿಯಲ್ಲಿ ಶಾಲಾ ಕಾಲೇಜುಗಳಲ್ಲಿ ಆನ್ ಲೈನ್ ಮೂಲಕ ಸ್ಪರ್ಧೆ ಹಮ್ಮಿಕೊಂಡು ಜಾಗೃತಿ ಮೂಡಿಸುವ ದಿಕ್ಕಿನಲ್ಲಿ ಇಲಾಖೆ ಹೆಜ್ಜೆ ಹಾಕಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಎಸಿಎಫ್, ಸತೀಶ್, ವೀರನಹೊಸಹಳ್ಳಿ ಆರ್.ಎಫ್.ಒ ರವೀಂದ್ರ ಮೇಟಿಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: 66ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯ ಇಲಾಖೆ ಹಮ್ಮಿಕೊಂಡಿರುವ ರಣಹದ್ದುಗಳು ಭವಿಷ್ಯಕ್ಕಾಗಿ ಜಾಥಾ ಮತ್ತು ಅರಿವು ಸೈಕಲ್ ಜಾಥಾಕ್ಕೆ ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಿದರು.</p>.<p>‘ರಾಜ್ಯದಾದ್ಯಂತ ಅ. 2ರಿಂದ 8ರವರಗೆ ನಡೆಯಲಿರುವ ಸಪ್ತಾಹದಲ್ಲಿ ಆನೆ ಚಲನವಲನ ಪಥ ಸಂರಕ್ಷಣೆ ವಿಷಯವನ್ನು ಕೇಂದ್ರೀಕೃತವಾಗಿ ಅರಣ್ಯದಂಚಿನ ನಾಗರಿಕರಲ್ಲಿ ಅರಿವು ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಮುತ್ತೋಡಿಯಿಂದ ಬೆಂಗಳೂರುವರೆಗೆ ಸೈಕಲ್ ಜಾಥಾ ನಡೆದಿದೆ’ ಎಂದರು.</p>.<p>ಜಾಥಾ ಅ. 4ರಂದು ನಾಗರಹೊಳೆ ತಲುಪಿ, ಅ. 5ರಂದು ಮೈಸೂರು ಮಾರ್ಗವಾಗಿಬೆಂಗಳೂರಿನತ್ತ ತೆರಳಿತು.</p>.<p class="Subhead"><strong>ಆನ್ ಲೈನ್ ಸ್ಪರ್ಧೆ:</strong> ಅರಣ್ಯದಲ್ಲಿ ವಿವಿಧ ಸೂಕ್ಷ್ಮ ಪ್ರಾಣಿ ಪಕ್ಷಿಗಳ ಕುರಿತು ಅರಿವು ಮೂಡಿಸುವ ಕೆಲಸವನ್ನು ವಿವಿಧ ರೀತಿಯಲ್ಲಿ ಶಾಲಾ ಕಾಲೇಜುಗಳಲ್ಲಿ ಆನ್ ಲೈನ್ ಮೂಲಕ ಸ್ಪರ್ಧೆ ಹಮ್ಮಿಕೊಂಡು ಜಾಗೃತಿ ಮೂಡಿಸುವ ದಿಕ್ಕಿನಲ್ಲಿ ಇಲಾಖೆ ಹೆಜ್ಜೆ ಹಾಕಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಎಸಿಎಫ್, ಸತೀಶ್, ವೀರನಹೊಸಹಳ್ಳಿ ಆರ್.ಎಫ್.ಒ ರವೀಂದ್ರ ಮೇಟಿಕುಪ್ಪೆ ವನ್ಯಜೀವಿ ವಲಯದ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>