ತನ್ನನ್ನು ಒಂದೂವರೆ ವರ್ಷದಿಂದ 5 ಬಾರಿ ವರ್ಗಾವಣೆ ಮಾಡಲಾಗಿದೆ. ಸದ್ಯ, ನಂಜನಗೂಡಿಗೆ ವರ್ಗಾವಣೆ ಮಾಡಿರುವುದು ಸರಿಯಲ್ಲ. ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದರು. ಇವರಿಗೆ ನಾಲ್ವರು ವೈದ್ಯರನ್ನು ಕರೆಸಿ ಕೌನ್ಸೆಲಿಂಗ್ ಮಾಡಿಸಲಾಯಿತು. ಆದರೆ, ಮತ್ತೆ ಕಚೇರಿಗೆ ನುಗ್ಗಿ ಕಡತಗಳನ್ನು ಎಸೆದು ಕರ್ತವ್ಯಕ್ಕೆ ಅಡ್ಡಿಪಡಿಸಿದರು. ಈ ಕುರಿತು ಶಿರಸ್ತೆದಾರ್ ಜಾನ್ಸನ್ ಅವರು ದೂರು ನೀಡಿದರು. ರಾತ್ರಿ 10 ಗಂಟೆಯವರೆಗೂ ಮನವೊಲಿಸುವ ಪ್ರಯತ್ನಗಳೂ ನಿಷ್ಪಲವಾದವು. ಅನಿವಾರ್ಯವಾಗಿ ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.