<p><strong>ತಲಕಾಡು: </strong>ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳಿಂದ ನದಿಗಳಿಗೆ ನೀರು ಹರಿಸುತ್ತಿರುವುದರಿಂದ ತಲಕಾಡಿನ ಮಾಧವ ಮಂತ್ರಿ ಅಣೆಕಟ್ಟೆ, ಕಾವೇರಿ ನಿಸರ್ಗಧಾಮ, ಮೇದನಿ ಗ್ರಾಮದ ಶ್ರೀರಾಮ ಕಟ್ಟೆಗಳು ಕಿರು ಜಲಪಾತಗಳಂತೆ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ.</p>.<p>ಕೇರಳದ ವೈನಾಡು, ರಾಜ್ಯದ ಕೊಡಗು ಭಾಗಗಳಲ್ಲಿ ಉತ್ತಮ ಮಳೆ ಬೀಳುತ್ತಿರುವುದರಿಂದ ಕೆಆರ್ಎಸ್ ಜಲಾಶಯ ಹಾಗೂ ಕಬಿನಿ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ, ಕಾವೇರಿ ಹಾಗೂ ಕಪಿಲಾ ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿಸಲಾಗುತ್ತಿದೆ.</p>.<p>ನಿಸರ್ಗಧಾಮದಲ್ಲಿ ಪ್ರವಾಸಿಗರು ಮೋಜು– ಮಸ್ತಿಯಲ್ಲಿ ತೊಡಗಿದ್ದಾರೆ. ದೋಣಿ ವಿಹಾರದ ಮೂಲಕ ನದಿಯ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಮೇದಿನಿ ಗ್ರಾಮದ ಶ್ರೀರಾಮಕಟ್ಟೆ ಸೊಬಗನ್ನು ಸವಿಯಲು ಪ್ರವಾಸಿಗರು ಬರುತ್ತಿದ್ದಾರೆ.</p>.<p>‘ಶ್ರೀರಾಮ ಕಟ್ಟೆ ಬಹಳ ಪುರಾತನವಾದದ್ದು. ಈ ಕಟ್ಟೆಯು ಶ್ರೀರಾಮನ ಬಿಲ್ಲಿನ ಆಕಾರದಲ್ಲಿದೆ. ಇದರ ಬಗ್ಗೆ ಮತ್ತಷ್ಟು ಪ್ರಚಾರ ಮಾಡಬೇಕಿದೆ’ ಎಂದು ಮೇದನಿ ಗ್ರಾಮಸ್ಥ ಬಸವರಾಜ್ ತಿಳಿಸಿದರು.</p>.<p>‘ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ನಿಸರ್ಗ ಧಾಮದಲ್ಲಿ ಜಲಕ್ರೀಡೆಗೆ ಅವಕಾಶ ನೀಡಿಲ್ಲ. ಇದರಿಂದ ಬೇಸರವಾಗಿದೆ’ ಎಂದು ಬೆಂಗಳೂರು ನಿವಾಸಿ ಸಂಜಯ್ ಹೇಳಿದರು.</p>.<p><strong>ಗ್ರಾಮಗಳು ಜಲಾವೃತಗೊಳ್ಳುವ ಭೀತಿ: </strong>ಜಲಾಶಯಗಳಿಂದ ಕಾಲುವೆ, ಕೆರೆ-ಕಟ್ಟೆಗಳಿಗೆ ನೀರು ಹರಿಸುವುದರಿಂದ, ಬೇಸಾಯದಲ್ಲಿ ತೊಡಗಲು ರೈತರು ಉತ್ಸುಕರಾಗಿದ್ದಾರೆ. ಭೂಮಿಯನ್ನು ಹದ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ತಲಕಾಡು ಹೋಬಳಿಯ ನದಿ ತೀರದ ಗ್ರಾಮಗಳಾದ ತಡಿಮಾಲಂಗಿ, ಕುಕ್ಕೂರು, ಮಡವಾಡಿ ಗ್ರಾಮಗಳು ಜಲಾವೃತಗೊಳ್ಳುವ ಭೀತಿಯಲ್ಲಿ ಜನರಿದ್ದಾರೆ. ಭತ್ತದ ಕಟಾವಿಗೆ ಮಳೆ ಅಡ್ಡಿಪಡಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಲಕಾಡು: </strong>ಕೆಆರ್ಎಸ್ ಹಾಗೂ ಕಬಿನಿ ಜಲಾಶಯಗಳಿಂದ ನದಿಗಳಿಗೆ ನೀರು ಹರಿಸುತ್ತಿರುವುದರಿಂದ ತಲಕಾಡಿನ ಮಾಧವ ಮಂತ್ರಿ ಅಣೆಕಟ್ಟೆ, ಕಾವೇರಿ ನಿಸರ್ಗಧಾಮ, ಮೇದನಿ ಗ್ರಾಮದ ಶ್ರೀರಾಮ ಕಟ್ಟೆಗಳು ಕಿರು ಜಲಪಾತಗಳಂತೆ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿವೆ.</p>.<p>ಕೇರಳದ ವೈನಾಡು, ರಾಜ್ಯದ ಕೊಡಗು ಭಾಗಗಳಲ್ಲಿ ಉತ್ತಮ ಮಳೆ ಬೀಳುತ್ತಿರುವುದರಿಂದ ಕೆಆರ್ಎಸ್ ಜಲಾಶಯ ಹಾಗೂ ಕಬಿನಿ ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ, ಕಾವೇರಿ ಹಾಗೂ ಕಪಿಲಾ ನದಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿಸಲಾಗುತ್ತಿದೆ.</p>.<p>ನಿಸರ್ಗಧಾಮದಲ್ಲಿ ಪ್ರವಾಸಿಗರು ಮೋಜು– ಮಸ್ತಿಯಲ್ಲಿ ತೊಡಗಿದ್ದಾರೆ. ದೋಣಿ ವಿಹಾರದ ಮೂಲಕ ನದಿಯ ಸೊಬಗನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಮೇದಿನಿ ಗ್ರಾಮದ ಶ್ರೀರಾಮಕಟ್ಟೆ ಸೊಬಗನ್ನು ಸವಿಯಲು ಪ್ರವಾಸಿಗರು ಬರುತ್ತಿದ್ದಾರೆ.</p>.<p>‘ಶ್ರೀರಾಮ ಕಟ್ಟೆ ಬಹಳ ಪುರಾತನವಾದದ್ದು. ಈ ಕಟ್ಟೆಯು ಶ್ರೀರಾಮನ ಬಿಲ್ಲಿನ ಆಕಾರದಲ್ಲಿದೆ. ಇದರ ಬಗ್ಗೆ ಮತ್ತಷ್ಟು ಪ್ರಚಾರ ಮಾಡಬೇಕಿದೆ’ ಎಂದು ಮೇದನಿ ಗ್ರಾಮಸ್ಥ ಬಸವರಾಜ್ ತಿಳಿಸಿದರು.</p>.<p>‘ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ನಿಸರ್ಗ ಧಾಮದಲ್ಲಿ ಜಲಕ್ರೀಡೆಗೆ ಅವಕಾಶ ನೀಡಿಲ್ಲ. ಇದರಿಂದ ಬೇಸರವಾಗಿದೆ’ ಎಂದು ಬೆಂಗಳೂರು ನಿವಾಸಿ ಸಂಜಯ್ ಹೇಳಿದರು.</p>.<p><strong>ಗ್ರಾಮಗಳು ಜಲಾವೃತಗೊಳ್ಳುವ ಭೀತಿ: </strong>ಜಲಾಶಯಗಳಿಂದ ಕಾಲುವೆ, ಕೆರೆ-ಕಟ್ಟೆಗಳಿಗೆ ನೀರು ಹರಿಸುವುದರಿಂದ, ಬೇಸಾಯದಲ್ಲಿ ತೊಡಗಲು ರೈತರು ಉತ್ಸುಕರಾಗಿದ್ದಾರೆ. ಭೂಮಿಯನ್ನು ಹದ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ತಲಕಾಡು ಹೋಬಳಿಯ ನದಿ ತೀರದ ಗ್ರಾಮಗಳಾದ ತಡಿಮಾಲಂಗಿ, ಕುಕ್ಕೂರು, ಮಡವಾಡಿ ಗ್ರಾಮಗಳು ಜಲಾವೃತಗೊಳ್ಳುವ ಭೀತಿಯಲ್ಲಿ ಜನರಿದ್ದಾರೆ. ಭತ್ತದ ಕಟಾವಿಗೆ ಮಳೆ ಅಡ್ಡಿಪಡಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>