ವಿಕ್ರಮ, ವಿಜಯಾ, ಗೋಪಿ, ಕಾವೇರಿ ಆಯ್ಕೆ ಬಹುತೇಕ ಖಚಿತವಾಗಿದೆ. ಆದರೆ, ಅರ್ಜುನ ಆನೆಗೆ 60 ವರ್ಷ ತುಂಬಿರುವುದರಿಂದ ಅಂಬಾರಿ ಹೊರುವ ಆನೆಯ ವಿಚಾರದಲ್ಲಿ ತುಸು ಗೊಂದಲ ಏರ್ಪಟ್ಟಿದೆ. ಅರಣ್ಯ ಇಲಾಖೆ ಮೂಲಗಳ ಪ್ರಕಾರ ಈ ಬಾರಿ ಅಭಿಮನ್ಯು ಆನೆಗೆ ಈ ಅವಕಾಶ ಸಿಗಲಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ 60 ವರ್ಷ ತುಂಬಿದ ಆನೆಗಳ ಮೇಲೆ ಹೆಚ್ಚು ಒತ್ತಡ ಹೇರುವಂತಿಲ್ಲ. ಹೀಗಾಗಿ, ಬಳ್ಳೆ ಶಿಬಿರದಿಂದ ಅರ್ಜುನನನ್ನು ಕರೆತರುವುದು ಅನುಮಾನ.