ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿನಿಂದ 3 ದಿನ ಶ್ರೀರಂಗಪಟ್ಟಣ ದಸರಾ

Last Updated 2 ಅಕ್ಟೋಬರ್ 2019, 18:57 IST
ಅಕ್ಷರ ಗಾತ್ರ

ಮಂಡ್ಯ: ಮೈಸೂರು ದಸರಾಕ್ಕೂ ಪುರಾತನವಾದ ಶ್ರೀರಂಗಪಟ್ಟಣ ದಸರಾ ಅ.3ರಿಂದ 5ರವರೆಗೆ ನಡೆಯಲಿದ್ದು, ಬಿಜೆಪಿಯ ಹಿರಿಯ ಮುಖಂಡ ಎಸ್‌.ಎಂ.ಕೃಷ್ಣ ಉತ್ಸವ ಉದ್ಘಾಟಿಸಲಿದ್ದಾರೆ.

ಕಿರಂಗೂರಿನ ಬನ್ನಿಮಂಟಪದಲ್ಲಿ ಮಧ್ಯಾಹ್ನ 3ಕ್ಕೆ ನಂದಿಧ್ವಜ ಪೂಜೆ ನಡೆಯಲಿದೆ. ನಂತರ ನಾಡದೇವತೆ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆ ಹಾಗೂ ಜಂಬೂ ಸವಾರಿ ಆರಂಭಗೊಳ್ಳಲಿದೆ. ಮೂರು ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ.

ಉತ್ಸವದಲ್ಲಿ ವಿಶೇಷವಾಗಿ ಹೆಲಿಕಾಪ್ಟರ್‌ ಜಾಯ್‌ ರೈಡ್‌, ಕೆಆರ್‌ಎಸ್‌ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೋತ್ಸವ ಆಯೋಜಿಸಲಾಗಿದೆ. ಬೃಂದಾವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT