<p><strong>ಮೈಸೂರು:</strong> ದಸರಾ ಮಹೋತ್ಸವ ಸಿದ್ಧತೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಆದರೆ, ದಸರಾ ಹಾಗೂ ಮೈಸೂರು ಅರಮನೆ ವೆಬ್ಸೈಟ್ಗಳು ಮಾತ್ರ ನಿದ್ರಾವಸ್ಥೆಯಲ್ಲಿವೆ.</p>.<p>ಅರಮನೆ ಮಂಡಳಿಯ ಅಧಿಕೃತ ವೆಬ್ಸೈಟ್<a href="http://www.mysorepalace.gov." target="_blank"> www.mysorepalace.gov.</a>in ಸ್ಥಗಿತಗೊಂಡು ತಿಂಗಳಾಗಿದ್ದು, ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುವ ಪ್ರವಾಸಿಗರಿಗೆ ತೊಂದರೆಯಾಗಿದೆ. ಅಲ್ಲದೆ, ಅರಮನೆ ಪ್ರವೇಶದ ಸಮಯ, ಶುಲ್ಕ, ವಿದ್ಯುತ್ ದೀಪಾಲಂಕಾರ ಮತ್ತಿತರ ಮಾಹಿತಿ ಪಡೆದುಕೊಳ್ಳಲು ಕಷ್ಟವಾಗಿದೆ.</p>.<p>ವರ್ಷಕ್ಕೆ ಸುಮಾರು 35 ಲಕ್ಷ ಪ್ರವಾಸಿಗರು ಅರಮನೆಗೆ ಭೇಟಿ ನೀಡುತ್ತಾರೆ. ಹೊರರಾಜ್ಯ ಹಾಗೂ ವಿದೇಶಗಳಿಂದ ಬರುವ ಪ್ರವಾಸಿಗರು ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುತ್ತಾರೆ. ಅವರೀಗ ಸರತಿ ಸಾಲಿನಲ್ಲೇ ನಿಂತು ಟಿಕೆಟ್ ಖರೀದಿಸಬೇಕಿದೆ.</p>.<p>ವೆಬ್ಸೈಟ್ ನಿರ್ವಹಣೆಗೆಂದು ಖಾಸಗಿ ಸಂಸ್ಥೆಯೊಂದರ ಜೊತೆ ಅರಮನೆ ಮಂಡಳಿಯು ಒಪ್ಪಂದ ಮಾಡಿಕೊಂಡಿತ್ತು. ಆ ಒಪ್ಪಂದ ನವೀಕರಿಸದೆ ಸ್ಥಗಿತಗೊಂಡಿದೆ.</p>.<p>ಮಾಹಿತಿಗೆ ಮಾರ್ಗ ಇಲ್ಲ: ದಸರಾ ಬಗ್ಗೆ ಮಾಹಿತಿ ನೀಡಲು ರೂಪಿಸಿರುವ <a href="http://www.mysoredasara.gov.in" target="_blank">www.mysoredasara.gov.in</a> ವೆಬ್ಸೈಟ್ ಕೂಡ ಕಾರ್ಯನಿರ್ವಹಿಸುತ್ತಿಲ್ಲ. ಈ ವೆಬ್ಸೈಟ್ ತೆರೆದರೆ ದಸರಾ ಲಾಂಛನ ಮಾತ್ರ ಕಾಣಿಸುತ್ತದೆ. ಹೀಗಾಗಿ, ನಾಡಹಬ್ಬದ ಮಾಹಿತಿ ಪಡೆಯಲು ಪ್ರವಾಸಿಗರಿಗೆ ಈಗ ಯಾವುದೇ ಮಾರ್ಗ ಇಲ್ಲದಂತಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಮಾಹಿತಿ ಒಂದೆಡೆ ಸಿಗುವ ವೆಬ್ಸೈಟ್ ಕೂಡ ಇಲ್ಲ.</p>.<p>‘ಖಾಸಗಿ ಸರ್ವರ್ನಿಂದ ಸರ್ಕಾರದ ಇ–ಗವರ್ನೆನ್ಸ್ ಸರ್ವರ್ಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಪ್ರವಾಸಿಗರ ಆಕರ್ಷಣೆಗಾಗಿ ವೆಬ್ಸೈಟ್ ಮರುವಿನ್ಯಾಸಗೊಳಿಸುತ್ತಿದ್ದು, ಸದ್ಯದಲ್ಲೇ ಮಾಹಿತಿ ಅಪ್ಲೋಡ್ ಮಾಡಲಾಗುವುದು’ ಎಂದು ವೆಬ್ಸೈಟ್ ಉಸ್ತುವಾರಿ ನೋಡಿಕೊಳ್ಳುವ ಸಿಬ್ಬಂದಿ ಹೇಳುತ್ತಾರೆ.</p>.<p><strong>ಇಂದು ನಾಡಿಗೆ ಗಜಪಡೆ</strong></p>.<p>ನಾಡಹಬ್ಬಕ್ಕೆ ನಾಂದಿ ಹಾಡುವ ಗಜಪಡೆಗೆ ಭಾನುವಾರ ಚಾಲನೆ ಲಭಿಸಲಿದೆ. ಬುಧವಾರ ಮೈಸೂರು ಅರಮನೆ ಪ್ರವೇಶಿಸಲಿವೆ.</p>.<p>ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿಯಿಂದ ಮೊದಲ ಹಂತದಲ್ಲಿ ಆರು ಆನೆಗಳು ಸಾಂಸ್ಕೃತಿಕ ನಗರಿಯತ್ತ ಹೆಜ್ಜೆ ಹಾಕಲಿವೆ.</p>.<p>ಅಂಬಾರಿ ಆನೆ ಅರ್ಜುನ ಸೇರಿದಂತೆ 12 ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. 37 ವರ್ಷದ ಧನಂಜಯ ಈ ಬಾರಿ ಹೊಸ ಅತಿಥಿ. ದುಬಾರೆ ಆನೆ ಶಿಬಿರದಿಂದ ಈ ಗಜವನ್ನು ಕರೆತರಲಾಗುತ್ತಿದೆ.</p>.<p><strong>ಆನೆಗಳಿಗೆ ₹ 34 ಲಕ್ಷ ಮೊತ್ತದ ವಿಮೆ</strong></p>.<p>ದಸರಾ ಮಹೋತ್ಸವದಲ್ಲಿ ಭಾಗವಹಿಸುವ 12 ಆನೆಗಳಿಗೆ ₹ 34 ಲಕ್ಷ ಮೊತ್ತದ ವಿಮೆ ಮಾಡಿಸಲಾಗುತ್ತಿದೆ.</p>.<p>ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಯ ವಿಭಾಗೀಯ ವ್ಯವಸ್ಥಾಪಕರಿಗೆ ಪತ್ರ ಬರೆದು ವಿಮೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ₹ 34 ಲಕ್ಷ ವಿಮೆಗಾಗಿ ₹ 40,120 ಪ್ರೀಮಿಯಂ ಪಾವತಿಸಲಾಗುತ್ತದೆ. 12 ಮಾವುತ ಹಾಗೂ ಕಾವಾಡಿಗಳಿಗೆ ತಲಾ ₹ 1 ಲಕ್ಷ ವಿಮೆ ಮಾಡಲಾಗುತ್ತದೆ.</p>.<p>ಆನೆಗಳು ದಸರಾ ಮೆರವಣಿಗೆ ಹಾಗೂ ತಾಲೀಮು ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿ– ಪಾಸ್ತಿಗೆ ನಷ್ಟ ಉಂಟು ಮಾಡಿದರೆ ಎನ್ನುವ ಕಾರಣಕ್ಕೆ ₹ 25 ಲಕ್ಷ ಮೊತ್ತದ ವಿಮೆ ಮಾಡಿಸಲಾಗುತ್ತದೆ. ಈ ವಿಮೆ ಅವಧಿಯು ಸೆ. 2ರಿಂದ ಅ. 31ರ ಅವಧಿಯ ನಡುವೆ ಚಾಲ್ತಿಯಲ್ಲಿ ಇರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ದಸರಾ ಮಹೋತ್ಸವ ಸಿದ್ಧತೆಗೆ ಈಗಾಗಲೇ ಚಾಲನೆ ನೀಡಲಾಗಿದೆ. ಆದರೆ, ದಸರಾ ಹಾಗೂ ಮೈಸೂರು ಅರಮನೆ ವೆಬ್ಸೈಟ್ಗಳು ಮಾತ್ರ ನಿದ್ರಾವಸ್ಥೆಯಲ್ಲಿವೆ.</p>.<p>ಅರಮನೆ ಮಂಡಳಿಯ ಅಧಿಕೃತ ವೆಬ್ಸೈಟ್<a href="http://www.mysorepalace.gov." target="_blank"> www.mysorepalace.gov.</a>in ಸ್ಥಗಿತಗೊಂಡು ತಿಂಗಳಾಗಿದ್ದು, ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುವ ಪ್ರವಾಸಿಗರಿಗೆ ತೊಂದರೆಯಾಗಿದೆ. ಅಲ್ಲದೆ, ಅರಮನೆ ಪ್ರವೇಶದ ಸಮಯ, ಶುಲ್ಕ, ವಿದ್ಯುತ್ ದೀಪಾಲಂಕಾರ ಮತ್ತಿತರ ಮಾಹಿತಿ ಪಡೆದುಕೊಳ್ಳಲು ಕಷ್ಟವಾಗಿದೆ.</p>.<p>ವರ್ಷಕ್ಕೆ ಸುಮಾರು 35 ಲಕ್ಷ ಪ್ರವಾಸಿಗರು ಅರಮನೆಗೆ ಭೇಟಿ ನೀಡುತ್ತಾರೆ. ಹೊರರಾಜ್ಯ ಹಾಗೂ ವಿದೇಶಗಳಿಂದ ಬರುವ ಪ್ರವಾಸಿಗರು ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುತ್ತಾರೆ. ಅವರೀಗ ಸರತಿ ಸಾಲಿನಲ್ಲೇ ನಿಂತು ಟಿಕೆಟ್ ಖರೀದಿಸಬೇಕಿದೆ.</p>.<p>ವೆಬ್ಸೈಟ್ ನಿರ್ವಹಣೆಗೆಂದು ಖಾಸಗಿ ಸಂಸ್ಥೆಯೊಂದರ ಜೊತೆ ಅರಮನೆ ಮಂಡಳಿಯು ಒಪ್ಪಂದ ಮಾಡಿಕೊಂಡಿತ್ತು. ಆ ಒಪ್ಪಂದ ನವೀಕರಿಸದೆ ಸ್ಥಗಿತಗೊಂಡಿದೆ.</p>.<p>ಮಾಹಿತಿಗೆ ಮಾರ್ಗ ಇಲ್ಲ: ದಸರಾ ಬಗ್ಗೆ ಮಾಹಿತಿ ನೀಡಲು ರೂಪಿಸಿರುವ <a href="http://www.mysoredasara.gov.in" target="_blank">www.mysoredasara.gov.in</a> ವೆಬ್ಸೈಟ್ ಕೂಡ ಕಾರ್ಯನಿರ್ವಹಿಸುತ್ತಿಲ್ಲ. ಈ ವೆಬ್ಸೈಟ್ ತೆರೆದರೆ ದಸರಾ ಲಾಂಛನ ಮಾತ್ರ ಕಾಣಿಸುತ್ತದೆ. ಹೀಗಾಗಿ, ನಾಡಹಬ್ಬದ ಮಾಹಿತಿ ಪಡೆಯಲು ಪ್ರವಾಸಿಗರಿಗೆ ಈಗ ಯಾವುದೇ ಮಾರ್ಗ ಇಲ್ಲದಂತಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಮಾಹಿತಿ ಒಂದೆಡೆ ಸಿಗುವ ವೆಬ್ಸೈಟ್ ಕೂಡ ಇಲ್ಲ.</p>.<p>‘ಖಾಸಗಿ ಸರ್ವರ್ನಿಂದ ಸರ್ಕಾರದ ಇ–ಗವರ್ನೆನ್ಸ್ ಸರ್ವರ್ಗೆ ವರ್ಗಾಯಿಸುವ ಪ್ರಕ್ರಿಯೆ ನಡೆಯುತ್ತಿದೆ. ಪ್ರವಾಸಿಗರ ಆಕರ್ಷಣೆಗಾಗಿ ವೆಬ್ಸೈಟ್ ಮರುವಿನ್ಯಾಸಗೊಳಿಸುತ್ತಿದ್ದು, ಸದ್ಯದಲ್ಲೇ ಮಾಹಿತಿ ಅಪ್ಲೋಡ್ ಮಾಡಲಾಗುವುದು’ ಎಂದು ವೆಬ್ಸೈಟ್ ಉಸ್ತುವಾರಿ ನೋಡಿಕೊಳ್ಳುವ ಸಿಬ್ಬಂದಿ ಹೇಳುತ್ತಾರೆ.</p>.<p><strong>ಇಂದು ನಾಡಿಗೆ ಗಜಪಡೆ</strong></p>.<p>ನಾಡಹಬ್ಬಕ್ಕೆ ನಾಂದಿ ಹಾಡುವ ಗಜಪಡೆಗೆ ಭಾನುವಾರ ಚಾಲನೆ ಲಭಿಸಲಿದೆ. ಬುಧವಾರ ಮೈಸೂರು ಅರಮನೆ ಪ್ರವೇಶಿಸಲಿವೆ.</p>.<p>ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ವೀರನಹೊಸಹಳ್ಳಿಯಿಂದ ಮೊದಲ ಹಂತದಲ್ಲಿ ಆರು ಆನೆಗಳು ಸಾಂಸ್ಕೃತಿಕ ನಗರಿಯತ್ತ ಹೆಜ್ಜೆ ಹಾಕಲಿವೆ.</p>.<p>ಅಂಬಾರಿ ಆನೆ ಅರ್ಜುನ ಸೇರಿದಂತೆ 12 ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ. 37 ವರ್ಷದ ಧನಂಜಯ ಈ ಬಾರಿ ಹೊಸ ಅತಿಥಿ. ದುಬಾರೆ ಆನೆ ಶಿಬಿರದಿಂದ ಈ ಗಜವನ್ನು ಕರೆತರಲಾಗುತ್ತಿದೆ.</p>.<p><strong>ಆನೆಗಳಿಗೆ ₹ 34 ಲಕ್ಷ ಮೊತ್ತದ ವಿಮೆ</strong></p>.<p>ದಸರಾ ಮಹೋತ್ಸವದಲ್ಲಿ ಭಾಗವಹಿಸುವ 12 ಆನೆಗಳಿಗೆ ₹ 34 ಲಕ್ಷ ಮೊತ್ತದ ವಿಮೆ ಮಾಡಿಸಲಾಗುತ್ತಿದೆ.</p>.<p>ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ನ್ಯೂ ಇಂಡಿಯಾ ಅಶೂರೆನ್ಸ್ ಕಂಪನಿಯ ವಿಭಾಗೀಯ ವ್ಯವಸ್ಥಾಪಕರಿಗೆ ಪತ್ರ ಬರೆದು ವಿಮೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ₹ 34 ಲಕ್ಷ ವಿಮೆಗಾಗಿ ₹ 40,120 ಪ್ರೀಮಿಯಂ ಪಾವತಿಸಲಾಗುತ್ತದೆ. 12 ಮಾವುತ ಹಾಗೂ ಕಾವಾಡಿಗಳಿಗೆ ತಲಾ ₹ 1 ಲಕ್ಷ ವಿಮೆ ಮಾಡಲಾಗುತ್ತದೆ.</p>.<p>ಆನೆಗಳು ದಸರಾ ಮೆರವಣಿಗೆ ಹಾಗೂ ತಾಲೀಮು ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿ– ಪಾಸ್ತಿಗೆ ನಷ್ಟ ಉಂಟು ಮಾಡಿದರೆ ಎನ್ನುವ ಕಾರಣಕ್ಕೆ ₹ 25 ಲಕ್ಷ ಮೊತ್ತದ ವಿಮೆ ಮಾಡಿಸಲಾಗುತ್ತದೆ. ಈ ವಿಮೆ ಅವಧಿಯು ಸೆ. 2ರಿಂದ ಅ. 31ರ ಅವಧಿಯ ನಡುವೆ ಚಾಲ್ತಿಯಲ್ಲಿ ಇರುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>