ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪ್ರತಾಪ ಸಿಂಹ, ‘ಚುನಾವಣೆಗೆ 48 ಗಂಟೆಗಳ ಮುನ್ನ ಅಭ್ಯರ್ಥಿಯ ತೇಜೋವಧೆ ಅಥವಾ ಮಾನಹಾನಿಕರವಾದ ಯಾವುದೇ ಸುದ್ದಿ ಪ್ರಕಟಿಸಬಾರದು ಎಂದು ನೀತಿ ಸಂಹಿತೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದರ ಆಧಾರದ ಮೇಲೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ. ಗೆಲ್ಲಲು ಆಗದೇ ಪುಕ್ಕಲುತನದಿಂದ ಹೀಗೆ ಮಾಡಲಾಗಿದೆ. ಇದರ ಹಿಂದಿನ ಉದ್ದೇಶ ಏನು ಎಂಬುದು ಎಂತಹವರಿಗಾದರೂ ತಿಳಿಯುತ್ತದೆ’ ಎಂದು ಹೇಳಿದ್ದಾರೆ.