ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕ್ಸಿಜನ್‌ ಕೊರತೆ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿಲ್ಲ: ಶ್ರೀನಿವಾಸ ಪ್ರಸಾದ್

Last Updated 3 ಮೇ 2021, 8:27 IST
ಅಕ್ಷರ ಗಾತ್ರ

ಮೈಸೂರು: ‘ಅಕ್ಸಿಜನ್ ಕೊರತೆ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿ ನನಗೆ ಮಾಹಿತಿ ನೀಡಿಲ್ಲ. ಜಿಲ್ಲಾಧಿಕಾರಿ ಜೊತೆ ಭಾನುವಾರ ರಾತ್ರಿ 9 ಗಂಟೆ ವೇಳೆಗೆ ಮಾತನಾಡಿದ್ದೆ. ಆಕ್ಸಿಜನ್‌ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದರು’ ಎಂದು ಚಾಮರಾಜನಗರದ ಸಂಸದ ವಿ.ಶ್ರೀನಿವಾಸಪ್ರಸಾದ್‌ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಚಾಮರಾಜನಗರದ ಜಿಲ್ಲಾಧಿಕಾರಿ ಮೈಸೂರು ಸಂಸದರ ಜೊತೆ ಮಾತನಾಡಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ. ಮೈಸೂರಿನಿಂದ ಆಕ್ಸಿಜನ್‌ ಪೂರೈಕೆ ಆಗಿಲ್ಲ ಎಂಬ ಮಾಹಿತಿಯಷ್ಟೆ ಸದ್ಯಕ್ಕೆ ನನಗೆ ಗೊತ್ತಾಗಿದೆ. ಕೋವಿಡ್‌ ಎರಡನೇ ಅಲೆ ವ್ಯಾಪಕವಾಗಿರುವ ಕಾರಣ ನಾನು ಚಾಮರಾಜನಗರಕ್ಕೆ ಹೋಗುತ್ತಿಲ್ಲ. ಘಟನೆಗೆ ಸಂಬಂಧಿಸಿದ ಎಲ್ಲ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ’ ಎಂದರು.

‘ಕೋವಿಡ್‌ ಮೊದಲನೇ ಅಲೆಯ ಸಂದರ್ಭದಲ್ಲಿ ಚಾಮರಾಜನಗರದ ಕೋವಿಡ್ ನಿರ್ವಹಣೆ ಬಗ್ಗೆ ಕೇಂದ್ರ ಸರ್ಕಾರವೇ ಮೆಚ್ವುಗೆ ವ್ಯಕ್ತಪಡಿಸಿತ್ತು. ಈಗ ಅಲ್ಲಿ ನಡೆದಿರುವ ಘಟನೆ ದುರದೃಷ್ಟಕರ. ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ನಾನು ಒತ್ತಾಯಿಸುತ್ತೇನೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT