ಮೈಸೂರಿನಲ್ಲಿ ಮಾಧ್ಯಮದವರ ಜತೆ ಮಾತನಾಡಿ, ಚಾಮರಾಜನಗರದ ಜಿಲ್ಲಾಧಿಕಾರಿ ಮೈಸೂರು ಸಂಸದರ ಜೊತೆ ಮಾತನಾಡಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ. ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿಲ್ಲ ಎಂಬ ಮಾಹಿತಿಯಷ್ಟೆ ಸದ್ಯಕ್ಕೆ ನನಗೆ ಗೊತ್ತಾಗಿದೆ. ಕೋವಿಡ್ ಎರಡನೇ ಅಲೆ ವ್ಯಾಪಕವಾಗಿರುವ ಕಾರಣ ನಾನು ಚಾಮರಾಜನಗರಕ್ಕೆ ಹೋಗುತ್ತಿಲ್ಲ. ಘಟನೆಗೆ ಸಂಬಂಧಿಸಿದ ಎಲ್ಲ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ’ ಎಂದರು.